ರಾಷ್ಟ್ರೀಯ

ಭೂಕಂಪಕ್ಕೆ ತುತ್ತಾದ ಜಪಾನಿಗರಿಗೆ ಸಂತಾಪ: ಜಪಾನ್‌ ಪ್ರಧಾನಿಗೆ ಮೋದಿ ಪತ್ರ!

ನವದೆಹಲಿ : ಹೊಸ ವರ್ಷದ ಮೊದಲ ದಿನ ಜನವರಿ 1 ರಂದು ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಜಪಾನ್ ಮತ್ತು ಅದರ ಜನರೊಂದಿಗೆ ಭಾರತದ ಒಗ್ಗಟ್ಟನ್ನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ.

ವಿಶೇಷ ಕಾರ್ಯತಂತ್ರದ ಮತ್ತು ಜಾಗತಿಕ ಪಾಲುದಾರರಾಗಿ ಜಪಾನ್’ನೊಂದಿಗಿನ ಸಂಬಂಧವನ್ನ ಭಾರತ ಗೌರವಿಸುತ್ತದೆ ಮತ್ತು ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನ ನೀಡಲು ಸಿದ್ಧವಾಗಿದೆ ಎಂದು ಮೋದಿ ಗುರುವಾರ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಪಾನ್ನ ಉತ್ತರದ ತುದಿಯ ನೊಟೊದಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 90 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ಬಗ್ಗೆ ‘ತೀವ್ರ ದುಃಖ ಮತ್ತು ಕಳವಳ’ ವ್ಯಕ್ತಪಡಿಸಿರುವುದಾಗಿ ಪ್ರಧಾನಿ ಜಪಾನ್ ಪ್ರಧಾನಿಗೆ ತಿಳಿಸಿದರು ಮತ್ತು ಭೂಕಂಪದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ‘ಆಳವಾದ ಸಂತಾಪ’ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಜನವರಿ 1 ರಂದು ಜಪಾನ್ನಲ್ಲಿ ಸಂಭವಿಸಿದ ದೊಡ್ಡ ಭೂಕಂಪದ ಬಗ್ಗೆ ತಿಳಿದು ನನಗೆ ತೀವ್ರ ದುಃಖ ಮತ್ತು ಕಳವಳವಾಗಿದೆ ಎಂದು ಮೋದಿ ಹೇಳಿದರು. ಪ್ರಾಣ ಕಳೆದುಕೊಂಡವರ ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನ ವ್ಯಕ್ತಪಡಿಸುತ್ತೇನೆ. ನಾವು ಜಪಾನ್ ಮತ್ತು ವಿಪತ್ತಿನಿಂದ ಬಾಧಿತರಾದ ಅದರ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ’ ಎಂದು ಮೋದಿ ಜಪಾನ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

andolanait

Recent Posts

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

51 mins ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…

2 hours ago

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…

2 hours ago

ರಾಜ್ಯದಲ್ಲಿ ಆಘಾತಕಾರಿ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…

3 hours ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ…

3 hours ago