ರಾಷ್ಟ್ರೀಯ

ಭೂಕಂಪಕ್ಕೆ ತುತ್ತಾದ ಜಪಾನಿಗರಿಗೆ ಸಂತಾಪ: ಜಪಾನ್‌ ಪ್ರಧಾನಿಗೆ ಮೋದಿ ಪತ್ರ!

ನವದೆಹಲಿ : ಹೊಸ ವರ್ಷದ ಮೊದಲ ದಿನ ಜನವರಿ 1 ರಂದು ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಜಪಾನ್ ಮತ್ತು ಅದರ ಜನರೊಂದಿಗೆ ಭಾರತದ ಒಗ್ಗಟ್ಟನ್ನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ.

ವಿಶೇಷ ಕಾರ್ಯತಂತ್ರದ ಮತ್ತು ಜಾಗತಿಕ ಪಾಲುದಾರರಾಗಿ ಜಪಾನ್’ನೊಂದಿಗಿನ ಸಂಬಂಧವನ್ನ ಭಾರತ ಗೌರವಿಸುತ್ತದೆ ಮತ್ತು ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನ ನೀಡಲು ಸಿದ್ಧವಾಗಿದೆ ಎಂದು ಮೋದಿ ಗುರುವಾರ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಪಾನ್ನ ಉತ್ತರದ ತುದಿಯ ನೊಟೊದಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುಮಾರು 90 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ಬಗ್ಗೆ ‘ತೀವ್ರ ದುಃಖ ಮತ್ತು ಕಳವಳ’ ವ್ಯಕ್ತಪಡಿಸಿರುವುದಾಗಿ ಪ್ರಧಾನಿ ಜಪಾನ್ ಪ್ರಧಾನಿಗೆ ತಿಳಿಸಿದರು ಮತ್ತು ಭೂಕಂಪದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ‘ಆಳವಾದ ಸಂತಾಪ’ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಜನವರಿ 1 ರಂದು ಜಪಾನ್ನಲ್ಲಿ ಸಂಭವಿಸಿದ ದೊಡ್ಡ ಭೂಕಂಪದ ಬಗ್ಗೆ ತಿಳಿದು ನನಗೆ ತೀವ್ರ ದುಃಖ ಮತ್ತು ಕಳವಳವಾಗಿದೆ ಎಂದು ಮೋದಿ ಹೇಳಿದರು. ಪ್ರಾಣ ಕಳೆದುಕೊಂಡವರ ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನ ವ್ಯಕ್ತಪಡಿಸುತ್ತೇನೆ. ನಾವು ಜಪಾನ್ ಮತ್ತು ವಿಪತ್ತಿನಿಂದ ಬಾಧಿತರಾದ ಅದರ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ’ ಎಂದು ಮೋದಿ ಜಪಾನ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago