ರಾಷ್ಟ್ರೀಯ

ಅಮಿತ್ ಶಾ, ಹಿಮಂತ ಬಿಸ್ವ ಶರ್ಮಾ ವಿರುದ್ಧ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್‌ ದೂರು

ನವದೆಹಲಿ : ಹಿರಿಯ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರ ನಿಯೋಗವೊಂದು ಬುಧವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮತ್ತು ಇತರ ಚುನಾವಣಾಧಿಕಾರಿಗಳನ್ನು ಭೇಟಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ದೂರುಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಈ ಬಿಜೆಪಿ ನಾಯಕರು ವಿಭಜನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಲ್ಮಾನ್‌ ಖುರ್ಷಿದ್‌, ಮಾಣಿಕ್‌ರಾವ್‌ ಠಾಕ್ರೆ, ರೇವನಾಥ್‌ ರೆಡ್ಡಿ, ಉತ್ತಮ್‌ ಕುಮಾರ್‌ ರೆಡ್ಡಿ, ಭಟ್ಟಿ ವಿಕ್ರಮಾರ್ಕ ಮುಂತಾದ ಹಿರಿಯ ಕಾಂಗ್ರೆಸ್‌ ನಾಯಕರು ನಿಯೋಗದಲ್ಲಿದ್ದರು.

“ಭೂಪೇಶ್‌ ಬಘೇಲ್‌ ಸರ್ಕಾರವು ಓಲೈಕೆ ರಾಜಕಾರಣ ಮತ್ತು ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ, ಛತ್ತೀಸಗಢದ ಸರ್ಕಾರ ಪುತ್ರ ಭುನೇಶ್ವರ್‌ ಸಾಹೂವನ್ನು ಹತ್ಯೆ ಮಾಡಿಸಿದೆ,” ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದೇ ಅಲ್ಲದೆ “ಬಿಜೆಪಿಯು ಭುವನೇಶ್ವರ್‌ ಸಾಹೂ ಹಂತಕರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತದೆ ಮತ್ತು ಅವರ ಗೌರವಾರ್ಥ ಅವರ ತಂದೆ ಈಶ್ವರ್‌ ಸಾಹೂ ಅನ್ನು ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದೆ,” ಎಂದು ಅಮಿತ್ ಶಾ ಹೇಳಿದ್ಧಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಗೃಹ ಸಚಿವರ ಹೇಳಿಕೆಯು ಐಪಿಸಿ ಹಾಗೂ ಜನ ಪ್ರತಿನಿಧಿತ್ವ ಕಾಯಿದೆ 1951 ಇದರ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಕಾಂಗ್ರೆಸ್‌ ನಾಯಕ ಮುಹಮ್ಮದ್‌ ಅಕ್ಬರ್‌ ವಿರುದ್ಧದ ಪ್ರಚಾರದಲ್ಲಿ “ಒಬ್ಬ ಅಕ್ಬರ್‌ ಒಂದು ಜಾಗಕ್ಕೆ ಬಂದರೆ, ಆತ 100 ಅಕ್ಬರರನ್ನು ಕರೆಯುತ್ತಾನೆ. ಆದ್ದರಿಂದ ಅವರನ್ನು ಆದಷ್ಟು ಬೇಗ ವಾಪಸ್‌ ಕಳಿಸಿ, ಇಲ್ಲದೇ ಹೋದಲ್ಲಿ ಮಾತೆ ಕೌಶಲ್ಯಳ ಭೂಮಿ ಅಪವಿತ್ರವಾಗಲಿದೆ,” ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಹೇಳಿದೆ.

ಛತ್ತೀಸಗಢ ಸರ್ಕಾರವು ಆದಿವಾಸಿಗಳಿಗೆ ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ಪ್ರತಿದಿನ ಪ್ರೇರೇಪಿಸುತ್ತಿದೆ ಎಂದು ಸರ್ಮ ಆರೋಪಿಸಿದ್ದಾರೆ ಎಂದೂ ಕಾಂಗ್ರೆಸ್‌ ದೂರಿನಲ್ಲಿ ಹೇಳಿದೆ ಹಾಗೂ ಸಿಎಂ ಹೇಳಿಕೆಯು ಒಂದು ಸಮುದಾಯವನ್ನು ಇನ್ನೊಂದು ಸಮುದಾಯಕ್ಕೆದುರಾಗಿ ಎತ್ತಿ ಕಟ್ಟುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದೆ.

andolanait

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

5 hours ago