ರಾಷ್ಟ್ರೀಯ

ಅಮಿತ್ ಶಾ, ಹಿಮಂತ ಬಿಸ್ವ ಶರ್ಮಾ ವಿರುದ್ಧ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್‌ ದೂರು

ನವದೆಹಲಿ : ಹಿರಿಯ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರ ನಿಯೋಗವೊಂದು ಬುಧವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮತ್ತು ಇತರ ಚುನಾವಣಾಧಿಕಾರಿಗಳನ್ನು ಭೇಟಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ದೂರುಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಈ ಬಿಜೆಪಿ ನಾಯಕರು ವಿಭಜನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಲ್ಮಾನ್‌ ಖುರ್ಷಿದ್‌, ಮಾಣಿಕ್‌ರಾವ್‌ ಠಾಕ್ರೆ, ರೇವನಾಥ್‌ ರೆಡ್ಡಿ, ಉತ್ತಮ್‌ ಕುಮಾರ್‌ ರೆಡ್ಡಿ, ಭಟ್ಟಿ ವಿಕ್ರಮಾರ್ಕ ಮುಂತಾದ ಹಿರಿಯ ಕಾಂಗ್ರೆಸ್‌ ನಾಯಕರು ನಿಯೋಗದಲ್ಲಿದ್ದರು.

“ಭೂಪೇಶ್‌ ಬಘೇಲ್‌ ಸರ್ಕಾರವು ಓಲೈಕೆ ರಾಜಕಾರಣ ಮತ್ತು ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ, ಛತ್ತೀಸಗಢದ ಸರ್ಕಾರ ಪುತ್ರ ಭುನೇಶ್ವರ್‌ ಸಾಹೂವನ್ನು ಹತ್ಯೆ ಮಾಡಿಸಿದೆ,” ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದೇ ಅಲ್ಲದೆ “ಬಿಜೆಪಿಯು ಭುವನೇಶ್ವರ್‌ ಸಾಹೂ ಹಂತಕರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತದೆ ಮತ್ತು ಅವರ ಗೌರವಾರ್ಥ ಅವರ ತಂದೆ ಈಶ್ವರ್‌ ಸಾಹೂ ಅನ್ನು ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದೆ,” ಎಂದು ಅಮಿತ್ ಶಾ ಹೇಳಿದ್ಧಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಗೃಹ ಸಚಿವರ ಹೇಳಿಕೆಯು ಐಪಿಸಿ ಹಾಗೂ ಜನ ಪ್ರತಿನಿಧಿತ್ವ ಕಾಯಿದೆ 1951 ಇದರ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಕಾಂಗ್ರೆಸ್‌ ನಾಯಕ ಮುಹಮ್ಮದ್‌ ಅಕ್ಬರ್‌ ವಿರುದ್ಧದ ಪ್ರಚಾರದಲ್ಲಿ “ಒಬ್ಬ ಅಕ್ಬರ್‌ ಒಂದು ಜಾಗಕ್ಕೆ ಬಂದರೆ, ಆತ 100 ಅಕ್ಬರರನ್ನು ಕರೆಯುತ್ತಾನೆ. ಆದ್ದರಿಂದ ಅವರನ್ನು ಆದಷ್ಟು ಬೇಗ ವಾಪಸ್‌ ಕಳಿಸಿ, ಇಲ್ಲದೇ ಹೋದಲ್ಲಿ ಮಾತೆ ಕೌಶಲ್ಯಳ ಭೂಮಿ ಅಪವಿತ್ರವಾಗಲಿದೆ,” ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಹೇಳಿದೆ.

ಛತ್ತೀಸಗಢ ಸರ್ಕಾರವು ಆದಿವಾಸಿಗಳಿಗೆ ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ಪ್ರತಿದಿನ ಪ್ರೇರೇಪಿಸುತ್ತಿದೆ ಎಂದು ಸರ್ಮ ಆರೋಪಿಸಿದ್ದಾರೆ ಎಂದೂ ಕಾಂಗ್ರೆಸ್‌ ದೂರಿನಲ್ಲಿ ಹೇಳಿದೆ ಹಾಗೂ ಸಿಎಂ ಹೇಳಿಕೆಯು ಒಂದು ಸಮುದಾಯವನ್ನು ಇನ್ನೊಂದು ಸಮುದಾಯಕ್ಕೆದುರಾಗಿ ಎತ್ತಿ ಕಟ್ಟುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದೆ.

andolanait

Recent Posts

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

23 mins ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

32 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

35 mins ago

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

1 hour ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

1 hour ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

2 hours ago