ರಾಷ್ಟ್ರೀಯ

ಕಾಂಗ್ರೆಸ್ ಎಂದಿಗೂ ಯಾವುದೇ ಧರ್ಮ ಅಥವಾ ಗುರುಗಳನ್ನು ನೋಯಿಸಿಲ್ಲ: ಎಐಸಿಸಿ ಅಧ್ಯಕ್ಷ ಖರ್ಗೆ

ನವದೆಹಲಿ: ರಾಮನ ಮೇಲೆ ನಂಬಿಕೆ ಇರುವವರು ಯಾವುದೇ ದಿನ ಅಯೋಧ್ಯೆ ದೇವಸ್ಥಾನಕ್ಕೆ ಭೇಟಿ ನೀಡಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿಯಲ್ಲಿಂದು ಮಾತನಾಡಿರುವ ಅವರು, ಜನವರಿ 22ರ ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿರುವುದಕ್ಕೆ ಬಿಜೆಪಿ “ಪಿತೂರಿ”ಯ ಭಾಗವಾಗಿ ತಮ್ಮ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆಯೆಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಎಂದಿಗೂ ಯಾವುದೇ ಧರ್ಮ ಅಥವಾ ಗುರುಗಳನ್ನು ನೋಯಿಸಿಲ್ಲ, ಬಿಜೆಪಿ ದಿಕ್ಕು ತಪ್ಪಿಸುವ ತಂತ್ರಕ್ಕೆ ನಾವು ಜಗ್ಗುವುದಿಲ್ಲ ಎಂದಿದ್ದಾರೆ.

ಬಿಜೆಪಿ ಅವಧಿಯಲ್ಲಿನ ಹಣದುಬ್ಬರ ಹಾಗೂ ನಿರುದ್ಯೋಗದಂತಹ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದನ್ನು ನಾವು ಮುಂದುವರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರು ಹೇಳಿದ್ದಾರೆ.

ಜನವರಿ 22 ರಂದು ನಡೆಯಲಿರುವ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಖರ್ಗೆ ಮತ್ತು ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು “ಗೌರವಯುತವಾಗಿ ತಿರಸ್ಕರಿಸಿದ್ದಾರೆ”. ಬಿಜೆಪಿ ಮತ್ತು ಆರ್‌ಎಸ್‌ಎಸ್ ಚುನಾವಣಾ ಲಾಭಕ್ಕಾಗಿ ರಾಮ ಮಂದಿರದಲ್ಲೂ “ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಈ ನಿರ್ಧಾರವನ್ನು ಟೀಕಿಸುತ್ತಿರುವ ಬಿಜೆಪಿ, ಕಾಂಗ್ರೆಸ್ “ಭಗವಾನ್ ರಾಮನ ವಿರೋಧಿ” ಎಂದು ಕರೆದಿದೆ.

ಬಿಜೆಪಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ರಾಮನ ಮೇಲೆ ನಂಬಿಕೆ ಇರುವವರು ನಾಳೆ ಅಥವಾ ನಾಡಿದ್ದು ಅಯೋಧ್ಯೆಗೆ ಹೋಗಬಹುದು ಎಂದು ಜನವರಿ 6ರಂದೇ ಸ್ಪಷ್ಟಪಡಿಸಿದ್ದೇನೆ. ನಮ್ಮ ವಿರುದ್ಧ ಮಾತನಾಡುವುದು ಸರಿಯಲ್ಲ. ನಮ್ಮ ವಿರುದ್ಧ ವಾಗ್ದಾಳಿ ಮಾಡುವುದು ಬಿಜೆಪಿಯ ಪಿತೂರಿಯಾಗಿದೆ ಎಂದಿದ್ದಾರೆ.

andolanait

Recent Posts

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

10 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

30 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

51 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

1 hour ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 hours ago