ರಾಷ್ಟ್ರೀಯ

ಕಾಂಗ್ರೆಸ್​​ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ: ಡಿಕೆ ಸುರೇಶ್‌ ಹೇಳಿಕೆಗೆ ಪಿಎಂ ಟಾಂಗ್‌!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಸುರೇಶ್‌ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಈಗ ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ಇನ್ನೂ ಭಾರತ ದೇಶವನ್ನು ಎಷ್ಟು ತುಂಡು ಗಳನ್ನಾಗಿ ಮಾಡುತ್ತಿರಾ? ಇಷ್ಟು ಒಡೆದಿರುವುದು ಸಾಕಾಗಿಲ್ವಾ. ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕು ಅಂದುಕೊಂಡಿದ್ದೀರಿ. ಕಾಂಗ್ರೆಸ್​​ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ. ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದರು.

ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗುತ್ತಿದೆ. ದಕ್ಷಿಣದ ರಾಜ್ಯಗಳಿಗೆ ತಾರತಮ್ಯ ಆಗುತ್ತಿದೆ ಎಂದು ಡಿಕೆ ಸುರೇಶ್ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ಪಕ್ಷದವರು ಹೇಳಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಡಿಕೆ ಸುರೇಶ್‌ ಅವರ ಮನೆಗು ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದೀಗ ಪಿಎಂ ಮೋದಿ ತಮ್ಮ ಭಾಷಣದ ವೇಳೆ ಈ ಪ್ರತ್ಯೇಕ ದೇಶ ಹೇಳಿಕೆಯನ್ನು ಪ್ರಸ್ತಾಪಿಸಿದ್ದು ಅದನ್ನೇ ಇಟ್ಟುಕೊಂಡು ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಇದೇ ಫೆಬ್ರವರಿ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

andolanait

Recent Posts

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

7 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

11 mins ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

7 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

10 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

11 hours ago