ರಾಷ್ಟ್ರೀಯ

ಕಾಂಗ್ರೆಸ್​​ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ: ಡಿಕೆ ಸುರೇಶ್‌ ಹೇಳಿಕೆಗೆ ಪಿಎಂ ಟಾಂಗ್‌!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯ ಕೊನೆಯ ಭಾಷಣದಲ್ಲಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಸುರೇಶ್‌ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಈಗ ಬಹಿರಂಗವಾಗಿ ದೇಶ ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಒಗ್ಗೂಡಿಸುವುದು ಇರಲಿ. ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ಇನ್ನೂ ಭಾರತ ದೇಶವನ್ನು ಎಷ್ಟು ತುಂಡು ಗಳನ್ನಾಗಿ ಮಾಡುತ್ತಿರಾ? ಇಷ್ಟು ಒಡೆದಿರುವುದು ಸಾಕಾಗಿಲ್ವಾ. ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕು ಅಂದುಕೊಂಡಿದ್ದೀರಿ. ಕಾಂಗ್ರೆಸ್​​ನವರು ಎಂದೂ ಕೂಡ ದೇಶವನ್ನು ಜೋಡಿಸಿಲ್ಲ. ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದರು.

ರಾಜ್ಯಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗುತ್ತಿದೆ. ದಕ್ಷಿಣದ ರಾಜ್ಯಗಳಿಗೆ ತಾರತಮ್ಯ ಆಗುತ್ತಿದೆ ಎಂದು ಡಿಕೆ ಸುರೇಶ್ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ಪಕ್ಷದವರು ಹೇಳಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಡಿಕೆ ಸುರೇಶ್‌ ಅವರ ಮನೆಗು ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದೀಗ ಪಿಎಂ ಮೋದಿ ತಮ್ಮ ಭಾಷಣದ ವೇಳೆ ಈ ಪ್ರತ್ಯೇಕ ದೇಶ ಹೇಳಿಕೆಯನ್ನು ಪ್ರಸ್ತಾಪಿಸಿದ್ದು ಅದನ್ನೇ ಇಟ್ಟುಕೊಂಡು ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಇದೇ ಫೆಬ್ರವರಿ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago