ರಾಷ್ಟ್ರೀಯ

ಭಾರತ್ ಜೋಡೋ ಯಾತ್ರೆ 2.0ಗೆ ಕಾಂಗ್ರೆಸ್‌ ಸಿದ್ಧತೆ!

ನವದೆಹಲಿ:  2024ರ ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ 2 ನೇ ಹಂತದ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಜನವರಿಯಿಂದ ಆರಂಭಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯಾತ್ರೆಯ ನೇತೃತ್ವ ವಹಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಭಾರತ್ ಜೋಡೋ ಯಾತ್ರೆಯ 2.0 ಆವೃತ್ತಿಯು ಹೈಬ್ರಿಡ್ ಮೋಡ್ ನಲ್ಲಿರಲಿದೆ. ಯಾತ್ರೆಯಲ್ಲಿ, ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಮೂಲಗಳ ಪ್ರಕಾರ, ಯಾತ್ರೆಗಾಗಿ ಪ್ರಸ್ತುತ ಎರಡು ಸಂಭಾವ್ಯ ಮಾರ್ಗಗಳು ಪರಿಗಣನೆಯಲ್ಲಿವೆ. ಅನುಮೋದನೆ ದೊರೆತರೆ, ಇದು ಈಶಾನ್ಯ ರಾಜ್ಯದಿಂದ ಪ್ರಾರಂಭವಾಗಲಿದೆ. ಯಾತ್ರೆಯ ಹೊಸ ಆವೃತ್ತಿಯು ನಿರ್ದಿಷ್ಟವಾಗಿ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಡಿಸೆಂಬರ್ 21 ರಂದು ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಯಾತ್ರೆಯ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಭಾರತ್ ಜೋಡೋ ಯಾತ್ರೆಯ ಮೊದಲ ಹಂತ ಸೆಪ್ಟೆಂಬರ್ 7, 2022 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು ಮತ್ತು ಸುಮಾರು 4,080 ಕಿ.ಮೀ ದೂರವನ್ನು ಕ್ರಮಿಸಿತು.

2023 ರ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆ ಕೊನೆಗೊಂಡಿತು. ಈ ಯಾತ್ರೆಯು 126 ದಿನಗಳಲ್ಲಿ 12 ರಾಜ್ಯಗಳ 75 ಜಿಲ್ಲೆಗಳನ್ನು ಕ್ರಮಿಸಿತ್ತು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago