ರಾಷ್ಟ್ರೀಯ

ಕೇಂದ್ರ ಸರ್ಕಾರದ ವಿರುದ್ಧ ʼಕಪ್ಪು ಪತ್ರʼ ಬಿಡುಗಡೆ ಮಾಡಿದ ಖರ್ಗೆ

ನವದೆಹಲಿ: ತೆರಿಗೆ ಹಣ ಹಂಚಿಕೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಆರೋಪ – ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಕೇಂದ್ರ ಸರ್ಕಾರದಿಂದ ತೆರಿಗೆ ಅನುದಾನ ಬಂದಿಲ್ಲ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ಎಐಸಿಸಿ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ಕಪ್ಪು ಪತ್ರ ಬಿಡುಗಡೆಗೊಳಿಸಿದ್ದಾರೆ.

ಬಜೆಟ್‌ ಅಧಿವೇಶನದಲ್ಲಿ ತಮ್ಮ ಸರ್ಕಾರದ ಹತ್ತು ವರ್ಷಗಳ ಅವಧಿಯ ಸಾಧನೆಗಳನ್ನು ಕಾಂಗ್ರೆಸ್‌ ಸರ್ಕಾರದ ಹತ್ತು ವರ್ಷಗಳ ಆಡಳಿತಾವಧಿಯಲ್ಲಾದ ಸಾಧನೆಗಳ ಜತೆ ಹೋಲಿಸಿ ಶ್ವೇತ ಪತ್ರ ಬಿಡುಗಡೆ ಮಾಡುವುದಾಗಿ ಬಿಜೆಪಿ ತಿಳಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ʼಹತ್ತು ವರ್ಷಗಳ ಅನ್ಯಾಯ ಕಾಲʼ ಎಂಬ ಹೆಸರಿನ ಅಡಿಯಲ್ಲಿ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ʼಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಾಯ ಮಾಡುತ್ತಿಲ್ಲ. ಅನುದಾನ ಬಿಡುಗಡೆ ಮಾಡಿದರೂ ಅದನ್ನು ರಾಜ್ಯಗಳು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಆರೋಪಿಸುತ್ತಿದೆʼ ಎಂದು ಕಪ್ಪು ಪತ್ರ ಬಿಡುಗಡೆ ವೇಳೆ ಖರ್ಗೆ ಹೇಳಿದರು.

ಶ್ವೇತಪತ್ರ ಬಿಡುಗಡೆ ಮಾಡುವುದರ ಕುರಿತು ಮಾತನಾಡಿದ ಖರ್ಗೆ ಸದ್ಯ ಹಣದುಬ್ಬರ ಹೆಚ್ಚಳವಾಗಿದೆ. ಕಾಂಗ್ರೆಸ್‌ ಇತಿಹಾಸ ಕೆದಕುವುದರಿಂದ ಏನೂ ಪ್ರಯೋಜನವಿಲ್ಲ ಎಂದು ಹೇಳಿದರು.

andolana

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

26 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

32 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

39 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

45 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

49 mins ago