ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ “40 ಸ್ಥಾನಗಳನ್ನು” ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.
“ಕಾಂಗ್ರೆಸ್ ದೇಶಾದ್ಯಂತ 300 ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಆದರೆ ಅವರು ಆ ಬಗ್ಗೆ ಗಮನ ಹರಿಸುವ ಬದಲು ಈಗ ರಾಜ್ಯದಲ್ಲಿ ಮುಸ್ಲಿಂ ಮತದಾರರನ್ನು ಪ್ರಚೋದಿಸಲು ಬಂದಿದ್ದಾರೆ. ಅವರು ಅವರು 300 ಮಂದಿ ಸ್ಪರ್ಧಿಸಿದರೂ 40 ಸ್ಥಾನಗಳನ್ನು ಪಡೆಯುತ್ತಾರೆಯೇ ಎಂದು ನನಗೆ ಅನುಮಾನವಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸಂಚರಿಸಿದ ಕಾಂಗ್ರೆಸ್ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಟೀಕಿಸಿದ ಬ್ಯಾನರ್ಜಿ, ರಾಜ್ಯಕ್ಕೆ ಬಂದಿರುವ “ವಲಸೆ ಹಕ್ಕಿಗಳಿಗೆ” “ಕೇವಲ ಫೋಟೋಗೆ ಅವಕಾಶ” ನೀಡುತ್ತಿದೆ ಎಂದಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷವು ಸಿದ್ಧವಾಗಿದೆ. ಆದರೆ ನಮ್ಮ ಪ್ರಸ್ತಾಪವನ್ನು ಅತ್ಯಂತ ಹಳೆಯ ಪಕ್ಷ ನಿರಾಕರಿಸಿದೆ ಎಂದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…