ರಾಷ್ಟ್ರೀಯ

ಲೋಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸೀಟ್‌ ಗೆಲ್ಲುವುದು ಅನಮಾನ: ಮಮತಾ ಬ್ಯಾನರ್ಜಿ!

ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ “40 ಸ್ಥಾನಗಳನ್ನು” ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.

“ಕಾಂಗ್ರೆಸ್ ದೇಶಾದ್ಯಂತ 300 ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಆದರೆ ಅವರು ಆ ಬಗ್ಗೆ ಗಮನ ಹರಿಸುವ ಬದಲು ಈಗ ರಾಜ್ಯದಲ್ಲಿ ಮುಸ್ಲಿಂ ಮತದಾರರನ್ನು ಪ್ರಚೋದಿಸಲು ಬಂದಿದ್ದಾರೆ. ಅವರು ಅವರು 300 ಮಂದಿ ಸ್ಪರ್ಧಿಸಿದರೂ 40 ಸ್ಥಾನಗಳನ್ನು ಪಡೆಯುತ್ತಾರೆಯೇ ಎಂದು ನನಗೆ ಅನುಮಾನವಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸಂಚರಿಸಿದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಟೀಕಿಸಿದ ಬ್ಯಾನರ್ಜಿ, ರಾಜ್ಯಕ್ಕೆ ಬಂದಿರುವ “ವಲಸೆ ಹಕ್ಕಿಗಳಿಗೆ” “ಕೇವಲ ಫೋಟೋಗೆ ಅವಕಾಶ” ನೀಡುತ್ತಿದೆ ಎಂದಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷವು ಸಿದ್ಧವಾಗಿದೆ. ಆದರೆ ನಮ್ಮ ಪ್ರಸ್ತಾಪವನ್ನು ಅತ್ಯಂತ ಹಳೆಯ ಪಕ್ಷ ನಿರಾಕರಿಸಿದೆ ಎಂದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago