ರಾಷ್ಟ್ರೀಯ

ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್‌:  ಭಾರತ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಲ್ಡೀವ್ಸ್‌ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಾಲ್ಡೀವ್ಸ್‌ ಸರ್ಕಾರ ಮರಿಯಮ್‌ ಶಿಯುನಾ, ಮಲ್ಶಾ ಮತ್ತು ಹಸನ್‌ ಜಿಹಾನ್‌ ಮೂವರು ಸಚಿವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಲೇವಡಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಭಾರತ ಈ ವಿಷಯವನ್ನು ಅಧಿಕೃತವಾಗಿ ಮಾಲ್ಡೀವ್ಸ್‌ ಸರ್ಕಾರಕ್ಕೆ ತಿಳಿಸಿತ್ತು. ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿರುವ ಮಾಲ್ಡೀವ್ಸ್‌ ಸರ್ಕಾರ ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವೆ ಮರಿಯಮ್‌ ಶಿಯುನಾ, ಸಾರಿಗೆ ಮತ್ತು ನಾಗರೀಕ ವಿಮಾನಯಾನ ಸಚಿವಾಲಯದ ಉಪ ಸಚಿವ ಹಸನ್‌ ಜಿಹಾನ್‌ ಮತ್ತು ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವ ಮಲ್ಶಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾಹಿದ್‌ ರಮೀಜ್‌: ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸವನ್ನು ಲೇವಡಿ ಮಾಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮಯಿಝು ಪಕ್ಷದ ಸದಸ್ಯ ಜಾಹಿದ್‌ ರಮೀಜ್‌ ಅವರು, ಸಾಮಾಜಿಕ ಮಾಧ್ಯಮ ಬಳಕೆದಾರರು ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಹೋಲಿಸುತ್ತಾರೆ. ಮಾಲ್ಡೀವ್ಸ್‌ ಸುಂದರವಾದ ಕಡಲ ತೀರಗಳಿಗೆ ಹೆಸರುವಾಸಿಯಾದ ಪ್ರವಾಸಿ ತಾಣವಾಗಿದೆ ಎಂದಿದ್ದರು.

ಮತ್ತು ಜನವರಿ ೫ ರಂದು ಮತ್ತೊಂದು ಟ್ವೀಟ್‌ ಮಾಡಿದ್ದ ಅವರು, ಭಾರತ ನಮ್ಮೊಂದಿಗೆ ಎಂದಿಗೂ ಸಮಾನವಾಗಲು ಸಾಧ್ಯವಿಲ್ಲ. ಮಾಲ್ಡೀವ್ಸ್‌ನಂತೆ ಸ್ವಚ್ಛತೆಯನ್ನು ಕಾಪಾಡಲು, ಪ್ರವಾಸಿಗರಿಗೆ ಒದಗಿಸುವ ಉತ್ತಮ ಸೇವೆಯನ್ನು ಭಾರತ ಹೇಗೆ ಒದಗಿಸುತ್ತದೆ? ಅವರ ಕೊಠಡಿಗಳಲ್ಲಿನ ವಾಸನೆಯೇ ಅವರಿಗೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಬರೆದುಕೊಂಡಿದ್ದರು.

ಜೊತೆಗೆ ಮಾಲ್ಡೀವ್ಸ್‌ನ ಸಚಿವ ಶಿಯುನಾ ಕೂಡಾ ಪ್ರಧಾನಿ ವಿರುದ್ಧ ವಿವಾದಾತ್ಮಕ ಪೋಸ್ಟ್‌ ಹಾಕಿದ್ದರು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ಮತ್ತು ಭಾರತ #Boycottmaldives ಅಭಿಯಾನ ನಡೆಸಿದ್ದರು. ಈ ಹಿನ್ನಲೆ ಶಿಯುನಾ ತಮ್ಮ ಪೋಸ್ಟ್‌ ಡಿಲೀಟ್‌ ಮಾಡಿದ್ದರು.

andolanait

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

17 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago