ರಾಷ್ಟ್ರೀಯ

ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್‌:  ಭಾರತ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಲ್ಡೀವ್ಸ್‌ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಾಲ್ಡೀವ್ಸ್‌ ಸರ್ಕಾರ ಮರಿಯಮ್‌ ಶಿಯುನಾ, ಮಲ್ಶಾ ಮತ್ತು ಹಸನ್‌ ಜಿಹಾನ್‌ ಮೂವರು ಸಚಿವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಲೇವಡಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಭಾರತ ಈ ವಿಷಯವನ್ನು ಅಧಿಕೃತವಾಗಿ ಮಾಲ್ಡೀವ್ಸ್‌ ಸರ್ಕಾರಕ್ಕೆ ತಿಳಿಸಿತ್ತು. ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿರುವ ಮಾಲ್ಡೀವ್ಸ್‌ ಸರ್ಕಾರ ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವೆ ಮರಿಯಮ್‌ ಶಿಯುನಾ, ಸಾರಿಗೆ ಮತ್ತು ನಾಗರೀಕ ವಿಮಾನಯಾನ ಸಚಿವಾಲಯದ ಉಪ ಸಚಿವ ಹಸನ್‌ ಜಿಹಾನ್‌ ಮತ್ತು ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವ ಮಲ್ಶಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾಹಿದ್‌ ರಮೀಜ್‌: ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸವನ್ನು ಲೇವಡಿ ಮಾಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮಯಿಝು ಪಕ್ಷದ ಸದಸ್ಯ ಜಾಹಿದ್‌ ರಮೀಜ್‌ ಅವರು, ಸಾಮಾಜಿಕ ಮಾಧ್ಯಮ ಬಳಕೆದಾರರು ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಹೋಲಿಸುತ್ತಾರೆ. ಮಾಲ್ಡೀವ್ಸ್‌ ಸುಂದರವಾದ ಕಡಲ ತೀರಗಳಿಗೆ ಹೆಸರುವಾಸಿಯಾದ ಪ್ರವಾಸಿ ತಾಣವಾಗಿದೆ ಎಂದಿದ್ದರು.

ಮತ್ತು ಜನವರಿ ೫ ರಂದು ಮತ್ತೊಂದು ಟ್ವೀಟ್‌ ಮಾಡಿದ್ದ ಅವರು, ಭಾರತ ನಮ್ಮೊಂದಿಗೆ ಎಂದಿಗೂ ಸಮಾನವಾಗಲು ಸಾಧ್ಯವಿಲ್ಲ. ಮಾಲ್ಡೀವ್ಸ್‌ನಂತೆ ಸ್ವಚ್ಛತೆಯನ್ನು ಕಾಪಾಡಲು, ಪ್ರವಾಸಿಗರಿಗೆ ಒದಗಿಸುವ ಉತ್ತಮ ಸೇವೆಯನ್ನು ಭಾರತ ಹೇಗೆ ಒದಗಿಸುತ್ತದೆ? ಅವರ ಕೊಠಡಿಗಳಲ್ಲಿನ ವಾಸನೆಯೇ ಅವರಿಗೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಬರೆದುಕೊಂಡಿದ್ದರು.

ಜೊತೆಗೆ ಮಾಲ್ಡೀವ್ಸ್‌ನ ಸಚಿವ ಶಿಯುನಾ ಕೂಡಾ ಪ್ರಧಾನಿ ವಿರುದ್ಧ ವಿವಾದಾತ್ಮಕ ಪೋಸ್ಟ್‌ ಹಾಕಿದ್ದರು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ಮತ್ತು ಭಾರತ #Boycottmaldives ಅಭಿಯಾನ ನಡೆಸಿದ್ದರು. ಈ ಹಿನ್ನಲೆ ಶಿಯುನಾ ತಮ್ಮ ಪೋಸ್ಟ್‌ ಡಿಲೀಟ್‌ ಮಾಡಿದ್ದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago