ರಾಷ್ಟ್ರೀಯ

ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

ಮಾಲ್ಡೀವ್ಸ್‌:  ಭಾರತ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಲ್ಡೀವ್ಸ್‌ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಾಲ್ಡೀವ್ಸ್‌ ಸರ್ಕಾರ ಮರಿಯಮ್‌ ಶಿಯುನಾ, ಮಲ್ಶಾ ಮತ್ತು ಹಸನ್‌ ಜಿಹಾನ್‌ ಮೂವರು ಸಚಿವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಲೇವಡಿ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಭಾರತ ಈ ವಿಷಯವನ್ನು ಅಧಿಕೃತವಾಗಿ ಮಾಲ್ಡೀವ್ಸ್‌ ಸರ್ಕಾರಕ್ಕೆ ತಿಳಿಸಿತ್ತು. ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿರುವ ಮಾಲ್ಡೀವ್ಸ್‌ ಸರ್ಕಾರ ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವೆ ಮರಿಯಮ್‌ ಶಿಯುನಾ, ಸಾರಿಗೆ ಮತ್ತು ನಾಗರೀಕ ವಿಮಾನಯಾನ ಸಚಿವಾಲಯದ ಉಪ ಸಚಿವ ಹಸನ್‌ ಜಿಹಾನ್‌ ಮತ್ತು ಯುವ ಸಬಲೀಕರಣ, ಮಾಹಿತಿ ಮತ್ತು ಕಲಾ ಸಚಿವಾಲಯ ಉಪ ಸಚಿವ ಮಲ್ಶಾ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾಹಿದ್‌ ರಮೀಜ್‌: ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸವನ್ನು ಲೇವಡಿ ಮಾಡಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮಯಿಝು ಪಕ್ಷದ ಸದಸ್ಯ ಜಾಹಿದ್‌ ರಮೀಜ್‌ ಅವರು, ಸಾಮಾಜಿಕ ಮಾಧ್ಯಮ ಬಳಕೆದಾರರು ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಹೋಲಿಸುತ್ತಾರೆ. ಮಾಲ್ಡೀವ್ಸ್‌ ಸುಂದರವಾದ ಕಡಲ ತೀರಗಳಿಗೆ ಹೆಸರುವಾಸಿಯಾದ ಪ್ರವಾಸಿ ತಾಣವಾಗಿದೆ ಎಂದಿದ್ದರು.

ಮತ್ತು ಜನವರಿ ೫ ರಂದು ಮತ್ತೊಂದು ಟ್ವೀಟ್‌ ಮಾಡಿದ್ದ ಅವರು, ಭಾರತ ನಮ್ಮೊಂದಿಗೆ ಎಂದಿಗೂ ಸಮಾನವಾಗಲು ಸಾಧ್ಯವಿಲ್ಲ. ಮಾಲ್ಡೀವ್ಸ್‌ನಂತೆ ಸ್ವಚ್ಛತೆಯನ್ನು ಕಾಪಾಡಲು, ಪ್ರವಾಸಿಗರಿಗೆ ಒದಗಿಸುವ ಉತ್ತಮ ಸೇವೆಯನ್ನು ಭಾರತ ಹೇಗೆ ಒದಗಿಸುತ್ತದೆ? ಅವರ ಕೊಠಡಿಗಳಲ್ಲಿನ ವಾಸನೆಯೇ ಅವರಿಗೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಬರೆದುಕೊಂಡಿದ್ದರು.

ಜೊತೆಗೆ ಮಾಲ್ಡೀವ್ಸ್‌ನ ಸಚಿವ ಶಿಯುನಾ ಕೂಡಾ ಪ್ರಧಾನಿ ವಿರುದ್ಧ ವಿವಾದಾತ್ಮಕ ಪೋಸ್ಟ್‌ ಹಾಕಿದ್ದರು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದ್ದು, ಮತ್ತು ಭಾರತ #Boycottmaldives ಅಭಿಯಾನ ನಡೆಸಿದ್ದರು. ಈ ಹಿನ್ನಲೆ ಶಿಯುನಾ ತಮ್ಮ ಪೋಸ್ಟ್‌ ಡಿಲೀಟ್‌ ಮಾಡಿದ್ದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

5 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

7 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

8 hours ago