ರಾಷ್ಟ್ರೀಯ

ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ಬಿಕ್ಕಟ್ಟು : ಮೌನ ಮುರಿದ ಜೈಶಂಕರ್‌

ನಾಗ್ಪುರ:  ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ನಾಗ್ಪುರದಲ್ಲಿ ನಡೆದ ಸಭೆಯಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಪ್ರಶ್ನಿಸಿದಾಗ ಈ ಬಗ್ಗೆ ಮೌನ ಮುರಿದಿರುವ ಜೈಶಂಕರ್, “ದೇಶದಲ್ಲಿ ರಾಜಕೀಯ ವ್ಯವಸ್ಥೆ ಎಂದ ಮೇಲೆ ಏರಿಳಿತ ಇರುವುದಂತೂ ಸಾಮಾನ್ಯ.

ಅದರೆ ಭಾರತವೂ ಜಾಗತಿಕವಾಗಿ ಜನರಲ್ಲಿ ಸಕಾರಾತ್ಮಕ ಭಾವನೆಗಳನ್ನು ಬೆಳೆಸುತ್ತ ಕಳೆದ ಕೆಲ ವರ್ಷಗಳಿಂದ ಭಾರತದ ಮತ್ತಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾವು ಇಂದು ದೇಶದಲ್ಲಿ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ, ವಿದ್ಯುತ್, ಪ್ರಸರಣ, ಇಂಧನ ಪೂರೈಕೆ, ಹೂಡಿಕೆ ಎಲ್ಲದರಲ್ಲೂ ತೊಡಗಿಸಿಕೊಂಡಿದ್ದು, ದೇಶದ ಜನ ವಿದೇಶಗಳಿಗೆ ಪ್ರವಾಸಕ್ಕೆ ತೆರಳುವುದನ್ನು ಬೆಂಬಲಿಸುತ್ತೇವೆ.

ಇವೆಲ್ಲವೂ ನೀವು ಆ ಸಂಬಂಧಗಳನ್ನು ಹೇಗೆ ಅಭಿವೃದ್ಧಿಪಡಿಸುತ್ತೀರಿ ಎಂಬುದರ ಭಾಗವಾಗಿದೆ” ಎಂದು ಒತ್ತಿ ಹೇಳಿದರು.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

5 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

8 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

9 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

9 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

9 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

9 hours ago