ನಾಗ್ಪುರ: ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ಸಭೆಯಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಪ್ರಶ್ನಿಸಿದಾಗ ಈ ಬಗ್ಗೆ ಮೌನ ಮುರಿದಿರುವ ಜೈಶಂಕರ್, “ದೇಶದಲ್ಲಿ ರಾಜಕೀಯ ವ್ಯವಸ್ಥೆ ಎಂದ ಮೇಲೆ ಏರಿಳಿತ ಇರುವುದಂತೂ ಸಾಮಾನ್ಯ.
ಅದರೆ ಭಾರತವೂ ಜಾಗತಿಕವಾಗಿ ಜನರಲ್ಲಿ ಸಕಾರಾತ್ಮಕ ಭಾವನೆಗಳನ್ನು ಬೆಳೆಸುತ್ತ ಕಳೆದ ಕೆಲ ವರ್ಷಗಳಿಂದ ಭಾರತದ ಮತ್ತಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
“ನಾವು ಇಂದು ದೇಶದಲ್ಲಿ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ, ವಿದ್ಯುತ್, ಪ್ರಸರಣ, ಇಂಧನ ಪೂರೈಕೆ, ಹೂಡಿಕೆ ಎಲ್ಲದರಲ್ಲೂ ತೊಡಗಿಸಿಕೊಂಡಿದ್ದು, ದೇಶದ ಜನ ವಿದೇಶಗಳಿಗೆ ಪ್ರವಾಸಕ್ಕೆ ತೆರಳುವುದನ್ನು ಬೆಂಬಲಿಸುತ್ತೇವೆ.
ಇವೆಲ್ಲವೂ ನೀವು ಆ ಸಂಬಂಧಗಳನ್ನು ಹೇಗೆ ಅಭಿವೃದ್ಧಿಪಡಿಸುತ್ತೀರಿ ಎಂಬುದರ ಭಾಗವಾಗಿದೆ” ಎಂದು ಒತ್ತಿ ಹೇಳಿದರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…