ರಾಷ್ಟ್ರೀಯ

ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ಬಿಕ್ಕಟ್ಟು : ಮೌನ ಮುರಿದ ಜೈಶಂಕರ್‌

ನಾಗ್ಪುರ:  ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ನಾಗ್ಪುರದಲ್ಲಿ ನಡೆದ ಸಭೆಯಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಪ್ರಶ್ನಿಸಿದಾಗ ಈ ಬಗ್ಗೆ ಮೌನ ಮುರಿದಿರುವ ಜೈಶಂಕರ್, “ದೇಶದಲ್ಲಿ ರಾಜಕೀಯ ವ್ಯವಸ್ಥೆ ಎಂದ ಮೇಲೆ ಏರಿಳಿತ ಇರುವುದಂತೂ ಸಾಮಾನ್ಯ.

ಅದರೆ ಭಾರತವೂ ಜಾಗತಿಕವಾಗಿ ಜನರಲ್ಲಿ ಸಕಾರಾತ್ಮಕ ಭಾವನೆಗಳನ್ನು ಬೆಳೆಸುತ್ತ ಕಳೆದ ಕೆಲ ವರ್ಷಗಳಿಂದ ಭಾರತದ ಮತ್ತಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾವು ಇಂದು ದೇಶದಲ್ಲಿ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ, ವಿದ್ಯುತ್, ಪ್ರಸರಣ, ಇಂಧನ ಪೂರೈಕೆ, ಹೂಡಿಕೆ ಎಲ್ಲದರಲ್ಲೂ ತೊಡಗಿಸಿಕೊಂಡಿದ್ದು, ದೇಶದ ಜನ ವಿದೇಶಗಳಿಗೆ ಪ್ರವಾಸಕ್ಕೆ ತೆರಳುವುದನ್ನು ಬೆಂಬಲಿಸುತ್ತೇವೆ.

ಇವೆಲ್ಲವೂ ನೀವು ಆ ಸಂಬಂಧಗಳನ್ನು ಹೇಗೆ ಅಭಿವೃದ್ಧಿಪಡಿಸುತ್ತೀರಿ ಎಂಬುದರ ಭಾಗವಾಗಿದೆ” ಎಂದು ಒತ್ತಿ ಹೇಳಿದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago