ನಾಗ್ಪುರ: ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ಸಭೆಯಲ್ಲಿ, ಭಾರತ ಮತ್ತು ಮಾಲ್ಡೀವ್ಸ್ ದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ವಿಚಾರವಾಗಿ ಪ್ರಶ್ನಿಸಿದಾಗ ಈ ಬಗ್ಗೆ ಮೌನ ಮುರಿದಿರುವ ಜೈಶಂಕರ್, “ದೇಶದಲ್ಲಿ ರಾಜಕೀಯ ವ್ಯವಸ್ಥೆ ಎಂದ ಮೇಲೆ ಏರಿಳಿತ ಇರುವುದಂತೂ ಸಾಮಾನ್ಯ.
ಅದರೆ ಭಾರತವೂ ಜಾಗತಿಕವಾಗಿ ಜನರಲ್ಲಿ ಸಕಾರಾತ್ಮಕ ಭಾವನೆಗಳನ್ನು ಬೆಳೆಸುತ್ತ ಕಳೆದ ಕೆಲ ವರ್ಷಗಳಿಂದ ಭಾರತದ ಮತ್ತಷ್ಟು ಎತ್ತರಕ್ಕೆ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
“ನಾವು ಇಂದು ದೇಶದಲ್ಲಿ ಅತ್ಯುತ್ತಮ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ, ವಿದ್ಯುತ್, ಪ್ರಸರಣ, ಇಂಧನ ಪೂರೈಕೆ, ಹೂಡಿಕೆ ಎಲ್ಲದರಲ್ಲೂ ತೊಡಗಿಸಿಕೊಂಡಿದ್ದು, ದೇಶದ ಜನ ವಿದೇಶಗಳಿಗೆ ಪ್ರವಾಸಕ್ಕೆ ತೆರಳುವುದನ್ನು ಬೆಂಬಲಿಸುತ್ತೇವೆ.
ಇವೆಲ್ಲವೂ ನೀವು ಆ ಸಂಬಂಧಗಳನ್ನು ಹೇಗೆ ಅಭಿವೃದ್ಧಿಪಡಿಸುತ್ತೀರಿ ಎಂಬುದರ ಭಾಗವಾಗಿದೆ” ಎಂದು ಒತ್ತಿ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…