ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಿಸಲು ಪಣತೊಟ್ಟ ಜಾಗದಲ್ಲಿಯೇ ನಾವಿಂದು ರಾಮಮಂದಿರ ಉದ್ಘಾಟನೆ ಮಾಡಿದ್ದೇವೆ. ರಾಮಲಲ್ಲಾ ಸ್ಥಾಪನೆ ರಾಮರಾಜ್ಯದ ಹೆಗ್ಗುರುತಾಗಿದ್ದು, ಇಲ್ಲಿ ಸದಾ ರಾಮನಾಮ ಸ್ಮರಣೆ ನಡೆಯಲಿದೆ ಎಂದರು.
500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಇದು ದೇಶದ ಭಾವನಾತ್ಮಕ ಘಳಿಗೆಯಾಗಿದೆ. ಈ ದಿನ ದೇಶದ ಪ್ರತಿಯೊಂದು ನಗರ ಮತ್ತು ಹಳ್ಳಿಗಳು ಸಹಾ ಅಯೋಧ್ಯೆಯಾಗಿ ಬದಲಾಗಿದೆ, ಎಲ್ಲರೂ ಸಂತುಷ್ಟರಾಗಿದ್ದಾರೆ ಎಂದು ಯೋಗಿ ನುಡಿದರು.
ದೇಶದೆಲ್ಲೆಡೆ ರಾಮನ ಛಾಯೆ ಆವರಿಸಿದೆ. ನಾವು ತೇತ್ರಾಯುಗದಲ್ಲಿರುವಂತೆ ಭಾಸವಾಗುತ್ತಿದೆ. ಮಂದಿರದ ಕನಸು ನನಸಾಗಲು ಕಾರಣರಾದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು.
ಇದೇ ವೇಳೆ ಬಾಬ್ರಿ ಮಸೀದಿ ಇದ್ದ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಈ ಹಿಂದೆ ನಡೆದ ಹೋರಾಟಗಳಲ್ಲಿ ಬಳಕೆಯಾದ ಮಂದಿರ್ ವಹಿ ಬನಾಯೇಂಗೆ ಘೋಷಣೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…