ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.
ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.
ಭಾರಿ ಮಳೆ ಹಿನ್ನಲೆ ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಉಳಿಯುವಂತಾಗಿದೆ.
ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…