ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.
ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.
ಭಾರಿ ಮಳೆ ಹಿನ್ನಲೆ ಚೆನ್ನೈ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಉಳಿಯುವಂತಾಗಿದೆ.
ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…