ರಾಷ್ಟ್ರೀಯ

ಮೈಚಾಂಗ್‌ ಚಂಡಮಾರುತ: ತಮಿಳುನಾಡಿನಲ್ಲಿ ಇಬ್ಬರು ಬಲಿ

ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.

ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.

ಭಾರಿ ಮಳೆ ಹಿನ್ನಲೆ ಚೆನ್ನೈ ಏರ್​ಪೋರ್ಟ್​​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್​ಪ್ರೆಸ್​​ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್​ಪೋರ್ಟ್​ನಲ್ಲಿ ಉಳಿಯುವಂತಾಗಿದೆ. 

ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago