ರಾಷ್ಟ್ರೀಯ

ಡೀಪ್‌ ಫೇಕ್‌ ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ: ಐಟಿ ಸಚಿವ ವೈಷ್ಣವ್‌

ನವದೆಹಲಿ : ಡೀಪ್‌ ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದು ಐಟಿ ಸಚಿವ ಅಶ್ವಿನ್‌ ವೈಷ್ಣವ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಈಗಾಗಲೇ ಹಲವಾರು ಕ್ರಮ ಕೈಗೊಂಡಿದ್ದು, ಶೀಘ್ರವೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಡೀಪ್‌ಫೇಕ್‌ ಕುರಿತು ಸಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಭೇಟಿಯಾಗಿ ಚರ್ಚಿಸಿದರು.

ಡೀಪ್‌ಫೇಕ್‌ ಪತ್ತೆ ಹಚ್ಚುವ ವಿಧಾನ, ತಡೆಗಟ್ಟುವಿಕೆ, ವರದಿ ಕಾರ್ಯವಿಧಾನ ಬಲಪಡಿಸುವ ಬಗ್ಗೆ ಬಳಕೆದಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಂಬಂಧಪಟ್ಟ ಕಂಪನಿಗಳು ಒಪ್ಪಿಕೊಂಡಿವೆ ಎಂದು ಮಾಹಿತಿ ನೀಡಿದರು.

ಕರಡು ನಿಯಮಾವಳಿ ಸಿದ್ದಪಡಿಸಿ ಕಡಿಮೆ ಸಮಯದಲ್ಲಿ ಡೀಪ್‌ಫೇಕ್‌ಗಳನ್ನು ತಡೆಯಲು ಹೊಸ ನಿಯಮಾವಳಿ ರೂಪಿಸಲಾಗುವುದು. ನಿಯಮಗಳ ತಿದ್ದುಪಡಿ ಅಥವಾ ಹೊಸ ನಿಯಮಗಳು ಮತ್ತು ಕಾನೂನನ್ನು ಹೊರತರಲು ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಡೀಪ್‌ಫೇಕ್‌ ಪ್ರಜಾಫ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದ್ದು, ಇದನ್ನು ಎದುರಿಸಲು ಅಗತ್ಯ ಕ್ರಮಗಳ ಬಗೆಗಿನ ಸಭೆಯನ್ನು ಡಿಸೆಂಬರ್‌ ಮೊದಲ ವಾರದಲ್ಲಿ ನಡೆಸಲಾಗುವುದು. ಇದು ಮುಂದಿನ ಕ್ರಮ ಮತ್ತು ಇಂದಿನ ನಿರ್ಧಾರಗಳ ಮೇಲೆ ಕರಡು ನಿಯಮಾವಳಿಗಳಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗವುದು ಎಂದು ಐಟಿ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದರು.

andolanait

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

34 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago