ನವದೆಹಲಿ : ಡೀಪ್ ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದು ಐಟಿ ಸಚಿವ ಅಶ್ವಿನ್ ವೈಷ್ಣವ್ ಕಳವಳ ವ್ಯಕ್ತಪಡಿಸಿದ್ದಾರೆ.
ಡೀಪ್ಫೇಕ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಈಗಾಗಲೇ ಹಲವಾರು ಕ್ರಮ ಕೈಗೊಂಡಿದ್ದು, ಶೀಘ್ರವೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಡೀಪ್ಫೇಕ್ ಕುರಿತು ಸಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಭೇಟಿಯಾಗಿ ಚರ್ಚಿಸಿದರು.
ಡೀಪ್ಫೇಕ್ ಪತ್ತೆ ಹಚ್ಚುವ ವಿಧಾನ, ತಡೆಗಟ್ಟುವಿಕೆ, ವರದಿ ಕಾರ್ಯವಿಧಾನ ಬಲಪಡಿಸುವ ಬಗ್ಗೆ ಬಳಕೆದಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಂಬಂಧಪಟ್ಟ ಕಂಪನಿಗಳು ಒಪ್ಪಿಕೊಂಡಿವೆ ಎಂದು ಮಾಹಿತಿ ನೀಡಿದರು.
ಕರಡು ನಿಯಮಾವಳಿ ಸಿದ್ದಪಡಿಸಿ ಕಡಿಮೆ ಸಮಯದಲ್ಲಿ ಡೀಪ್ಫೇಕ್ಗಳನ್ನು ತಡೆಯಲು ಹೊಸ ನಿಯಮಾವಳಿ ರೂಪಿಸಲಾಗುವುದು. ನಿಯಮಗಳ ತಿದ್ದುಪಡಿ ಅಥವಾ ಹೊಸ ನಿಯಮಗಳು ಮತ್ತು ಕಾನೂನನ್ನು ಹೊರತರಲು ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಡೀಪ್ಫೇಕ್ ಪ್ರಜಾಫ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದ್ದು, ಇದನ್ನು ಎದುರಿಸಲು ಅಗತ್ಯ ಕ್ರಮಗಳ ಬಗೆಗಿನ ಸಭೆಯನ್ನು ಡಿಸೆಂಬರ್ ಮೊದಲ ವಾರದಲ್ಲಿ ನಡೆಸಲಾಗುವುದು. ಇದು ಮುಂದಿನ ಕ್ರಮ ಮತ್ತು ಇಂದಿನ ನಿರ್ಧಾರಗಳ ಮೇಲೆ ಕರಡು ನಿಯಮಾವಳಿಗಳಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗವುದು ಎಂದು ಐಟಿ ಸಚಿವ ಅಶ್ವಿನ್ ವೈಷ್ಣವ್ ಹೇಳಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…