ರಾಷ್ಟ್ರೀಯ

ಡೀಪ್‌ ಫೇಕ್‌ ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ: ಐಟಿ ಸಚಿವ ವೈಷ್ಣವ್‌

ನವದೆಹಲಿ : ಡೀಪ್‌ ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದು ಐಟಿ ಸಚಿವ ಅಶ್ವಿನ್‌ ವೈಷ್ಣವ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಈಗಾಗಲೇ ಹಲವಾರು ಕ್ರಮ ಕೈಗೊಂಡಿದ್ದು, ಶೀಘ್ರವೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ಡೀಪ್‌ಫೇಕ್‌ ಕುರಿತು ಸಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಭೇಟಿಯಾಗಿ ಚರ್ಚಿಸಿದರು.

ಡೀಪ್‌ಫೇಕ್‌ ಪತ್ತೆ ಹಚ್ಚುವ ವಿಧಾನ, ತಡೆಗಟ್ಟುವಿಕೆ, ವರದಿ ಕಾರ್ಯವಿಧಾನ ಬಲಪಡಿಸುವ ಬಗ್ಗೆ ಬಳಕೆದಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಂಬಂಧಪಟ್ಟ ಕಂಪನಿಗಳು ಒಪ್ಪಿಕೊಂಡಿವೆ ಎಂದು ಮಾಹಿತಿ ನೀಡಿದರು.

ಕರಡು ನಿಯಮಾವಳಿ ಸಿದ್ದಪಡಿಸಿ ಕಡಿಮೆ ಸಮಯದಲ್ಲಿ ಡೀಪ್‌ಫೇಕ್‌ಗಳನ್ನು ತಡೆಯಲು ಹೊಸ ನಿಯಮಾವಳಿ ರೂಪಿಸಲಾಗುವುದು. ನಿಯಮಗಳ ತಿದ್ದುಪಡಿ ಅಥವಾ ಹೊಸ ನಿಯಮಗಳು ಮತ್ತು ಕಾನೂನನ್ನು ಹೊರತರಲು ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಡೀಪ್‌ಫೇಕ್‌ ಪ್ರಜಾಫ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದ್ದು, ಇದನ್ನು ಎದುರಿಸಲು ಅಗತ್ಯ ಕ್ರಮಗಳ ಬಗೆಗಿನ ಸಭೆಯನ್ನು ಡಿಸೆಂಬರ್‌ ಮೊದಲ ವಾರದಲ್ಲಿ ನಡೆಸಲಾಗುವುದು. ಇದು ಮುಂದಿನ ಕ್ರಮ ಮತ್ತು ಇಂದಿನ ನಿರ್ಧಾರಗಳ ಮೇಲೆ ಕರಡು ನಿಯಮಾವಳಿಗಳಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗವುದು ಎಂದು ಐಟಿ ಸಚಿವ ಅಶ್ವಿನ್‌ ವೈಷ್ಣವ್‌ ಹೇಳಿದರು.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

55 mins ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

4 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

4 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

4 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

6 hours ago