ನವದೆಹಲಿ : ಡೀಪ್ ಫೇಕ್ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದು ಐಟಿ ಸಚಿವ ಅಶ್ವಿನ್ ವೈಷ್ಣವ್ ಕಳವಳ ವ್ಯಕ್ತಪಡಿಸಿದ್ದಾರೆ.
ಡೀಪ್ಫೇಕ್ಗಳಿಗೆ ಕಡಿವಾಣ ಹಾಕಲು ಸರ್ಕಾರ ಈಗಾಗಲೇ ಹಲವಾರು ಕ್ರಮ ಕೈಗೊಂಡಿದ್ದು, ಶೀಘ್ರವೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಡೀಪ್ಫೇಕ್ ಕುರಿತು ಸಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಭೇಟಿಯಾಗಿ ಚರ್ಚಿಸಿದರು.
ಡೀಪ್ಫೇಕ್ ಪತ್ತೆ ಹಚ್ಚುವ ವಿಧಾನ, ತಡೆಗಟ್ಟುವಿಕೆ, ವರದಿ ಕಾರ್ಯವಿಧಾನ ಬಲಪಡಿಸುವ ಬಗ್ಗೆ ಬಳಕೆದಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಂಬಂಧಪಟ್ಟ ಕಂಪನಿಗಳು ಒಪ್ಪಿಕೊಂಡಿವೆ ಎಂದು ಮಾಹಿತಿ ನೀಡಿದರು.
ಕರಡು ನಿಯಮಾವಳಿ ಸಿದ್ದಪಡಿಸಿ ಕಡಿಮೆ ಸಮಯದಲ್ಲಿ ಡೀಪ್ಫೇಕ್ಗಳನ್ನು ತಡೆಯಲು ಹೊಸ ನಿಯಮಾವಳಿ ರೂಪಿಸಲಾಗುವುದು. ನಿಯಮಗಳ ತಿದ್ದುಪಡಿ ಅಥವಾ ಹೊಸ ನಿಯಮಗಳು ಮತ್ತು ಕಾನೂನನ್ನು ಹೊರತರಲು ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಡೀಪ್ಫೇಕ್ ಪ್ರಜಾಫ್ರಭುತ್ವಕ್ಕೆ ಹೊಸ ಬೆದರಿಕೆಯಾಗಿದ್ದು, ಇದನ್ನು ಎದುರಿಸಲು ಅಗತ್ಯ ಕ್ರಮಗಳ ಬಗೆಗಿನ ಸಭೆಯನ್ನು ಡಿಸೆಂಬರ್ ಮೊದಲ ವಾರದಲ್ಲಿ ನಡೆಸಲಾಗುವುದು. ಇದು ಮುಂದಿನ ಕ್ರಮ ಮತ್ತು ಇಂದಿನ ನಿರ್ಧಾರಗಳ ಮೇಲೆ ಕರಡು ನಿಯಮಾವಳಿಗಳಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗವುದು ಎಂದು ಐಟಿ ಸಚಿವ ಅಶ್ವಿನ್ ವೈಷ್ಣವ್ ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…