ಕಳೆದ ವಾರ ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಅದೇ ದಿನ ಉತ್ತರಪ್ರದೇಶದ ಜಲೌನ್ನ ಒರೈ ಪ್ರದೇಶದ ಅತುಲ್ ಕುಲ್ಶ್ರೇಷ್ಠ ಎಂಬಾತನನ್ನೂ ಸಹ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಗಳ ಪ್ರಕಾರ ಅತುಲ್ ಕುಲ್ಶ್ರೇಷ್ಠ 50 ವರ್ಷ ವಯಸ್ಸಿನ ರೈತ ಎಂದು ತಿಳಿದುಬಂದಿದೆ ಹಾಗೂ ಈತನಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಜಲೌನ್ನ ಒರೈನಲ್ಲಿ ವಾಸವಿರುವ ಈತ ಅಲ್ಲಿ ಎಡಪಂಥೀಯ ಸಿದ್ಧಾಂತವನ್ನು ಬೆಂಬಲಿಸುವ ಮೂಲಕವೇ ಹೆಸರುವಾಸಿಯಾಗಿದ್ದ ಎನ್ನಲಾಗಿದೆ. ಈತ ಫೇಸ್ಬುಕ್ನಲ್ಲಿ ಭಗತ್ಸಿಂಗ್ ಫ್ಯಾನ್ಸ್ ಕ್ಲಬ್ನ ಸದಸ್ಯನಾಗಿದ್ದ ಹಾಗೂ ಆ ಗುಂಪಿನಲ್ಲಿ ಬಂಧಿತರಾಗಿರುವವರ ಪೈಕಿ ಐದು ಮಂದಿ ಸಹ ಇದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಆ ಐವರ ಪೈಕಿ ಒಬ್ಬರು ಅತುಲ್ ಜತೆ ಚಾಟ್ ಮಾಡಿದ್ದರು ಎನ್ನಲಾಗಿದೆ.
ಈ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಜಲೌನ್ ಎಸ್ಪಿ ಇರಾಜ್ ರಾಜ್ “ದೆಹಲಿ ಪೊಲೀಸರ ತಂಡವೊಂದು ಇಲ್ಲಿಗೆ ಬಂದು ಅತುಲ್ ಎಂಬುವವರನ್ನು ತಮ್ಮೊಟ್ಟಿಗೆ ಕರೆದುಕೊಂಡು ಹೋಗಿದ್ದಾರೆ ಹಾಗೂ ಅವರು ಈ ಕುರಿತು ನಮಗೆ ಹೆಚ್ಚೇನೂ ಮಾಹಿತಿ ನೀಡಿಲ್ಲ” ಎಂದು ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…