ಕಳೆದ ವಾರ ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಅದೇ ದಿನ ಉತ್ತರಪ್ರದೇಶದ ಜಲೌನ್ನ ಒರೈ ಪ್ರದೇಶದ ಅತುಲ್ ಕುಲ್ಶ್ರೇಷ್ಠ ಎಂಬಾತನನ್ನೂ ಸಹ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಗಳ ಪ್ರಕಾರ ಅತುಲ್ ಕುಲ್ಶ್ರೇಷ್ಠ 50 ವರ್ಷ ವಯಸ್ಸಿನ ರೈತ ಎಂದು ತಿಳಿದುಬಂದಿದೆ ಹಾಗೂ ಈತನಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಜಲೌನ್ನ ಒರೈನಲ್ಲಿ ವಾಸವಿರುವ ಈತ ಅಲ್ಲಿ ಎಡಪಂಥೀಯ ಸಿದ್ಧಾಂತವನ್ನು ಬೆಂಬಲಿಸುವ ಮೂಲಕವೇ ಹೆಸರುವಾಸಿಯಾಗಿದ್ದ ಎನ್ನಲಾಗಿದೆ. ಈತ ಫೇಸ್ಬುಕ್ನಲ್ಲಿ ಭಗತ್ಸಿಂಗ್ ಫ್ಯಾನ್ಸ್ ಕ್ಲಬ್ನ ಸದಸ್ಯನಾಗಿದ್ದ ಹಾಗೂ ಆ ಗುಂಪಿನಲ್ಲಿ ಬಂಧಿತರಾಗಿರುವವರ ಪೈಕಿ ಐದು ಮಂದಿ ಸಹ ಇದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಆ ಐವರ ಪೈಕಿ ಒಬ್ಬರು ಅತುಲ್ ಜತೆ ಚಾಟ್ ಮಾಡಿದ್ದರು ಎನ್ನಲಾಗಿದೆ.
ಈ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಜಲೌನ್ ಎಸ್ಪಿ ಇರಾಜ್ ರಾಜ್ “ದೆಹಲಿ ಪೊಲೀಸರ ತಂಡವೊಂದು ಇಲ್ಲಿಗೆ ಬಂದು ಅತುಲ್ ಎಂಬುವವರನ್ನು ತಮ್ಮೊಟ್ಟಿಗೆ ಕರೆದುಕೊಂಡು ಹೋಗಿದ್ದಾರೆ ಹಾಗೂ ಅವರು ಈ ಕುರಿತು ನಮಗೆ ಹೆಚ್ಚೇನೂ ಮಾಹಿತಿ ನೀಡಿಲ್ಲ” ಎಂದು ತಿಳಿಸಿದ್ದಾರೆ.
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…