ಕಳೆದ ವಾರ ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಅದೇ ದಿನ ಉತ್ತರಪ್ರದೇಶದ ಜಲೌನ್ನ ಒರೈ ಪ್ರದೇಶದ ಅತುಲ್ ಕುಲ್ಶ್ರೇಷ್ಠ ಎಂಬಾತನನ್ನೂ ಸಹ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಗಳ ಪ್ರಕಾರ ಅತುಲ್ ಕುಲ್ಶ್ರೇಷ್ಠ 50 ವರ್ಷ ವಯಸ್ಸಿನ ರೈತ ಎಂದು ತಿಳಿದುಬಂದಿದೆ ಹಾಗೂ ಈತನಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಜಲೌನ್ನ ಒರೈನಲ್ಲಿ ವಾಸವಿರುವ ಈತ ಅಲ್ಲಿ ಎಡಪಂಥೀಯ ಸಿದ್ಧಾಂತವನ್ನು ಬೆಂಬಲಿಸುವ ಮೂಲಕವೇ ಹೆಸರುವಾಸಿಯಾಗಿದ್ದ ಎನ್ನಲಾಗಿದೆ. ಈತ ಫೇಸ್ಬುಕ್ನಲ್ಲಿ ಭಗತ್ಸಿಂಗ್ ಫ್ಯಾನ್ಸ್ ಕ್ಲಬ್ನ ಸದಸ್ಯನಾಗಿದ್ದ ಹಾಗೂ ಆ ಗುಂಪಿನಲ್ಲಿ ಬಂಧಿತರಾಗಿರುವವರ ಪೈಕಿ ಐದು ಮಂದಿ ಸಹ ಇದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಆ ಐವರ ಪೈಕಿ ಒಬ್ಬರು ಅತುಲ್ ಜತೆ ಚಾಟ್ ಮಾಡಿದ್ದರು ಎನ್ನಲಾಗಿದೆ.
ಈ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಜಲೌನ್ ಎಸ್ಪಿ ಇರಾಜ್ ರಾಜ್ “ದೆಹಲಿ ಪೊಲೀಸರ ತಂಡವೊಂದು ಇಲ್ಲಿಗೆ ಬಂದು ಅತುಲ್ ಎಂಬುವವರನ್ನು ತಮ್ಮೊಟ್ಟಿಗೆ ಕರೆದುಕೊಂಡು ಹೋಗಿದ್ದಾರೆ ಹಾಗೂ ಅವರು ಈ ಕುರಿತು ನಮಗೆ ಹೆಚ್ಚೇನೂ ಮಾಹಿತಿ ನೀಡಿಲ್ಲ” ಎಂದು ತಿಳಿಸಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…