ರಾಷ್ಟ್ರೀಯ

ಸಂಸತ್‌ ಭದ್ರತಾ ಲೋಪ: ದೆಹಲಿ ಪೊಲೀಸರಿಂದ ಉತ್ತರಪ್ರದೇಶದಲ್ಲಿ ಮತ್ತೊಬ್ಬನ ಬಂಧನ

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಅದೇ ದಿನ ಉತ್ತರಪ್ರದೇಶದ ಜಲೌನ್‌ನ ಒರೈ ಪ್ರದೇಶದ ಅತುಲ್‌ ಕುಲ್‌ಶ್ರೇಷ್ಠ ಎಂಬಾತನನ್ನೂ ಸಹ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಗಳ ಪ್ರಕಾರ ಅತುಲ್‌ ಕುಲ್‌ಶ್ರೇಷ್ಠ 50 ವರ್ಷ ವಯಸ್ಸಿನ ರೈತ ಎಂದು ತಿಳಿದುಬಂದಿದೆ ಹಾಗೂ ಈತನಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ಹೇಳಲಾಗಿದೆ. ಜಲೌನ್‌ನ ಒರೈನಲ್ಲಿ ವಾಸವಿರುವ ಈತ ಅಲ್ಲಿ ಎಡಪಂಥೀಯ ಸಿದ್ಧಾಂತವನ್ನು ಬೆಂಬಲಿಸುವ ಮೂಲಕವೇ ಹೆಸರುವಾಸಿಯಾಗಿದ್ದ ಎನ್ನಲಾಗಿದೆ. ಈತ ಫೇಸ್‌ಬುಕ್‌ನಲ್ಲಿ ಭಗತ್‌ಸಿಂಗ್‌ ಫ್ಯಾನ್ಸ್‌ ಕ್ಲಬ್‌ನ ಸದಸ್ಯನಾಗಿದ್ದ ಹಾಗೂ ಆ ಗುಂಪಿನಲ್ಲಿ ಬಂಧಿತರಾಗಿರುವವರ ಪೈಕಿ ಐದು ಮಂದಿ ಸಹ ಇದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಆ ಐವರ ಪೈಕಿ ಒಬ್ಬರು ಅತುಲ್‌ ಜತೆ ಚಾಟ್‌ ಮಾಡಿದ್ದರು ಎನ್ನಲಾಗಿದೆ.

ಈ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಜಲೌನ್‌ ಎಸ್‌ಪಿ ಇರಾಜ್‌ ರಾಜ್‌ “ದೆಹಲಿ ಪೊಲೀಸರ ತಂಡವೊಂದು ಇಲ್ಲಿಗೆ ಬಂದು ಅತುಲ್‌ ಎಂಬುವವರನ್ನು ತಮ್ಮೊಟ್ಟಿಗೆ ಕರೆದುಕೊಂಡು ಹೋಗಿದ್ದಾರೆ ಹಾಗೂ ಅವರು ಈ ಕುರಿತು ನಮಗೆ ಹೆಚ್ಚೇನೂ ಮಾಹಿತಿ ನೀಡಿಲ್ಲ” ಎಂದು ತಿಳಿಸಿದ್ದಾರೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

46 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

7 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

7 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

7 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago