ರಾಷ್ಟ್ರೀಯ

ಮನೆ ಬಿಟ್ಟು ಹೊರ ಬಂದರಾ ಐಶ್ವರ್ಯ ರೈ!

ಐಶ್ವರ್ಯಾ ರೈ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಡಿವೋರ್ಸ್​ ಸುದ್ದಿ ಬಿಟೌನ್​ನಲ್ಲಿ ಹಲ್​ಚಲ್​ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸೊಸೆಯನ್ನು ಅಮಿತಾಭ್ ಬಚ್ಚನ್ ಅನ್​ಫಾಲೋ ಮಾಡಿದ ಬೆನ್ನಲ್ಲೇ ಮಾಜಿ ವಿಶ್ವಸುಂದರಿ ಬಚ್ಚನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗ್ತಿದೆ.

ಆದ್ರೆ ಇಲ್ಲೊಂದು ವಿಡಿಯೋ ಬೇರೆನೋ ಹೇಳ್ತಿದೆ. ಅಮಿತಾಬ್​ ಬಚ್ಚನ್​ ಬಾಲಿವುಡ್​ನ ಬಿಗ್​ಬಿ. ಇವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈರದ್ದು ಬಾಲಿವುಡ್​ನಲ್ಲಿ ದೊಡ್ಡ ಹೆಸರು. ಆದ್ರೆ ಕೆಲವು ದಿನಗಳಿಂದ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿ ಬಿಟೌನ್​ ಅಂಗಳದಲ್ಲಿ ಹರಡಿತ್ತು.

ಅದಕ್ಕೆ ಕಾರಣ 16 ವರ್ಷಗಳಿಂದ ವೈವಾಹಿಕ ಬಂಧನದಲ್ಲಿದ್ದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಕೆಲವು ಕಹಿ ಘಟನೆಗಳು. ಇದೀಗ ಮತ್ತೊಮ್ಮೆ ಐಶ್ವರ್ಯಾ ಹಾಗೂ ಅಭೀಷೇಕ್ ವಿಚ್ಛೇದನ ಸುದ್ದಿ ಮುನ್ನೆಲೆಗೆ ಬಂದಿದೆ.

ಐಶ್ವರ್ಯಾ ರೈ ಹಾಗೂ ಅತ್ತೆ ಜಯಾ ಬಚ್ಚನ್ ಮಧ್ಯೆ ಹಲವಾರು ಸಮಸ್ಯೆಗಳಿವೆ ಎನ್ನಲಾಗುತ್ತಿದೆ. ಇದೇ ವಿಚಾರವಾಗಿ ಹಲವಾರು ವರ್ಷಗಳಿಂದ ಅವರಿಬ್ಬರು ಮಾತನಾಡುತ್ತಿಲ್ಲ ಎಂದೂ ಹೇಳಲಾಗುತ್ತಿದೆ.

ಇದರ ನಡುವೆ ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ತಮ್ಮ ಮುದ್ದಿನ ಸೊಸೆ ಐಶ್ವರ್ಯಾ ರೈರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದಾಗ ಈ ವದಂತಿ ಜೋರಾಗಿತ್ತು.

ಮದುವೆ ಉಂಗುರ ಇಲ್ಲದೇ ಅಭಿಷೇಕ್ ಕಾಣಿಸಿಕೊಂಡಿದ್ದು ಕೂಡ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆದ್ರೆ ಅಭಿಷೇಕ್ ಐಶ್ವರ್ಯಾ ಮಧ್ಯೆ ಹಲವಾರು ವರ್ಷಗಳಿಂದ ದಾಂಪತ್ಯದಲ್ಲಿ ಕಲಹ ಇದ್ದರೂ ಅವರು ಅದನ್ನ ಹೊರಗೆ ತೋರಿಸಿಕೊಂಡಿರಲಿಲ್ಲ. ಮಗಳಿಗಾಗಿ ಇಬ್ಬರೂ ಇನ್ನೂ ಒಟ್ಟಿಗೆ ಇದ್ದಾರೆ ಎನ್ನಲಾಗುತ್ತಿದೆ.

ಈ ಜೋಡಿಯ ಕಲಹ ನಿರ್ಣಾಯಕ ಹಂತಕ್ಕೆ ಬಂದಿದೆ ಎಂಬ ಸುದ್ದಿ ಬಚ್ಚನ್​ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

2 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

4 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

4 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

4 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

5 hours ago