ರಾಷ್ಟ್ರೀಯ

ಮನೆ ಬಿಟ್ಟು ಹೊರ ಬಂದರಾ ಐಶ್ವರ್ಯ ರೈ!

ಐಶ್ವರ್ಯಾ ರೈ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಡಿವೋರ್ಸ್​ ಸುದ್ದಿ ಬಿಟೌನ್​ನಲ್ಲಿ ಹಲ್​ಚಲ್​ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸೊಸೆಯನ್ನು ಅಮಿತಾಭ್ ಬಚ್ಚನ್ ಅನ್​ಫಾಲೋ ಮಾಡಿದ ಬೆನ್ನಲ್ಲೇ ಮಾಜಿ ವಿಶ್ವಸುಂದರಿ ಬಚ್ಚನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗ್ತಿದೆ.

ಆದ್ರೆ ಇಲ್ಲೊಂದು ವಿಡಿಯೋ ಬೇರೆನೋ ಹೇಳ್ತಿದೆ. ಅಮಿತಾಬ್​ ಬಚ್ಚನ್​ ಬಾಲಿವುಡ್​ನ ಬಿಗ್​ಬಿ. ಇವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈರದ್ದು ಬಾಲಿವುಡ್​ನಲ್ಲಿ ದೊಡ್ಡ ಹೆಸರು. ಆದ್ರೆ ಕೆಲವು ದಿನಗಳಿಂದ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿ ಬಿಟೌನ್​ ಅಂಗಳದಲ್ಲಿ ಹರಡಿತ್ತು.

ಅದಕ್ಕೆ ಕಾರಣ 16 ವರ್ಷಗಳಿಂದ ವೈವಾಹಿಕ ಬಂಧನದಲ್ಲಿದ್ದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಕೆಲವು ಕಹಿ ಘಟನೆಗಳು. ಇದೀಗ ಮತ್ತೊಮ್ಮೆ ಐಶ್ವರ್ಯಾ ಹಾಗೂ ಅಭೀಷೇಕ್ ವಿಚ್ಛೇದನ ಸುದ್ದಿ ಮುನ್ನೆಲೆಗೆ ಬಂದಿದೆ.

ಐಶ್ವರ್ಯಾ ರೈ ಹಾಗೂ ಅತ್ತೆ ಜಯಾ ಬಚ್ಚನ್ ಮಧ್ಯೆ ಹಲವಾರು ಸಮಸ್ಯೆಗಳಿವೆ ಎನ್ನಲಾಗುತ್ತಿದೆ. ಇದೇ ವಿಚಾರವಾಗಿ ಹಲವಾರು ವರ್ಷಗಳಿಂದ ಅವರಿಬ್ಬರು ಮಾತನಾಡುತ್ತಿಲ್ಲ ಎಂದೂ ಹೇಳಲಾಗುತ್ತಿದೆ.

ಇದರ ನಡುವೆ ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ತಮ್ಮ ಮುದ್ದಿನ ಸೊಸೆ ಐಶ್ವರ್ಯಾ ರೈರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದಾಗ ಈ ವದಂತಿ ಜೋರಾಗಿತ್ತು.

ಮದುವೆ ಉಂಗುರ ಇಲ್ಲದೇ ಅಭಿಷೇಕ್ ಕಾಣಿಸಿಕೊಂಡಿದ್ದು ಕೂಡ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆದ್ರೆ ಅಭಿಷೇಕ್ ಐಶ್ವರ್ಯಾ ಮಧ್ಯೆ ಹಲವಾರು ವರ್ಷಗಳಿಂದ ದಾಂಪತ್ಯದಲ್ಲಿ ಕಲಹ ಇದ್ದರೂ ಅವರು ಅದನ್ನ ಹೊರಗೆ ತೋರಿಸಿಕೊಂಡಿರಲಿಲ್ಲ. ಮಗಳಿಗಾಗಿ ಇಬ್ಬರೂ ಇನ್ನೂ ಒಟ್ಟಿಗೆ ಇದ್ದಾರೆ ಎನ್ನಲಾಗುತ್ತಿದೆ.

ಈ ಜೋಡಿಯ ಕಲಹ ನಿರ್ಣಾಯಕ ಹಂತಕ್ಕೆ ಬಂದಿದೆ ಎಂಬ ಸುದ್ದಿ ಬಚ್ಚನ್​ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago