ರಾಷ್ಟ್ರೀಯ

ಮನೆ ಬಿಟ್ಟು ಹೊರ ಬಂದರಾ ಐಶ್ವರ್ಯ ರೈ!

ಐಶ್ವರ್ಯಾ ರೈ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಡಿವೋರ್ಸ್​ ಸುದ್ದಿ ಬಿಟೌನ್​ನಲ್ಲಿ ಹಲ್​ಚಲ್​ ಎಬ್ಬಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸೊಸೆಯನ್ನು ಅಮಿತಾಭ್ ಬಚ್ಚನ್ ಅನ್​ಫಾಲೋ ಮಾಡಿದ ಬೆನ್ನಲ್ಲೇ ಮಾಜಿ ವಿಶ್ವಸುಂದರಿ ಬಚ್ಚನ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗ್ತಿದೆ.

ಆದ್ರೆ ಇಲ್ಲೊಂದು ವಿಡಿಯೋ ಬೇರೆನೋ ಹೇಳ್ತಿದೆ. ಅಮಿತಾಬ್​ ಬಚ್ಚನ್​ ಬಾಲಿವುಡ್​ನ ಬಿಗ್​ಬಿ. ಇವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈರದ್ದು ಬಾಲಿವುಡ್​ನಲ್ಲಿ ದೊಡ್ಡ ಹೆಸರು. ಆದ್ರೆ ಕೆಲವು ದಿನಗಳಿಂದ ಬಚ್ಚನ್ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿ ಬಿಟೌನ್​ ಅಂಗಳದಲ್ಲಿ ಹರಡಿತ್ತು.

ಅದಕ್ಕೆ ಕಾರಣ 16 ವರ್ಷಗಳಿಂದ ವೈವಾಹಿಕ ಬಂಧನದಲ್ಲಿದ್ದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಕೆಲವು ಕಹಿ ಘಟನೆಗಳು. ಇದೀಗ ಮತ್ತೊಮ್ಮೆ ಐಶ್ವರ್ಯಾ ಹಾಗೂ ಅಭೀಷೇಕ್ ವಿಚ್ಛೇದನ ಸುದ್ದಿ ಮುನ್ನೆಲೆಗೆ ಬಂದಿದೆ.

ಐಶ್ವರ್ಯಾ ರೈ ಹಾಗೂ ಅತ್ತೆ ಜಯಾ ಬಚ್ಚನ್ ಮಧ್ಯೆ ಹಲವಾರು ಸಮಸ್ಯೆಗಳಿವೆ ಎನ್ನಲಾಗುತ್ತಿದೆ. ಇದೇ ವಿಚಾರವಾಗಿ ಹಲವಾರು ವರ್ಷಗಳಿಂದ ಅವರಿಬ್ಬರು ಮಾತನಾಡುತ್ತಿಲ್ಲ ಎಂದೂ ಹೇಳಲಾಗುತ್ತಿದೆ.

ಇದರ ನಡುವೆ ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ತಮ್ಮ ಮುದ್ದಿನ ಸೊಸೆ ಐಶ್ವರ್ಯಾ ರೈರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದಾಗ ಈ ವದಂತಿ ಜೋರಾಗಿತ್ತು.

ಮದುವೆ ಉಂಗುರ ಇಲ್ಲದೇ ಅಭಿಷೇಕ್ ಕಾಣಿಸಿಕೊಂಡಿದ್ದು ಕೂಡ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆದ್ರೆ ಅಭಿಷೇಕ್ ಐಶ್ವರ್ಯಾ ಮಧ್ಯೆ ಹಲವಾರು ವರ್ಷಗಳಿಂದ ದಾಂಪತ್ಯದಲ್ಲಿ ಕಲಹ ಇದ್ದರೂ ಅವರು ಅದನ್ನ ಹೊರಗೆ ತೋರಿಸಿಕೊಂಡಿರಲಿಲ್ಲ. ಮಗಳಿಗಾಗಿ ಇಬ್ಬರೂ ಇನ್ನೂ ಒಟ್ಟಿಗೆ ಇದ್ದಾರೆ ಎನ್ನಲಾಗುತ್ತಿದೆ.

ಈ ಜೋಡಿಯ ಕಲಹ ನಿರ್ಣಾಯಕ ಹಂತಕ್ಕೆ ಬಂದಿದೆ ಎಂಬ ಸುದ್ದಿ ಬಚ್ಚನ್​ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

4 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

6 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago