ರಾಷ್ಟ್ರೀಯ

ಜಾತಿಗಣತಿ ವರದಿಗೆ ಡಿಕೆಶಿ ವಿರೋಧ: ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಟೀಕೆ

ನವದೆಹಲಿ : ಜಾತಿ ಗಣತಿ ವರದಿ ಬಿಡುಗಡೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಿನ್ನ ನಿಲುವು ವ್ಯಕ್ತಪಡಿಸಿದ್ದಾರೆ. ವರದಿ ಬಿಡುಗಡೆಯಾಗುವ ಮೊದಲೇ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಡಿಕೆ ನಿಲುವಿನ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಟೀಕೆ ಮಾಡಿದ್ದಾರೆ.

ಸೋಮವಾರ ರಾಜ್ಯಸಭೆಯಲ್ಲಿ ಬಹಿರಂಗವಾಗಿ ಟೀಕಿಸಿರುವ ಖರ್ಗೆ ಅವರು, ಜಾತಿಗಣತಿ ವಿರುದ್ಧ ಎಲ್ಲಾ ಮೇಲ್ಜಾತಿಗಳ ಜನರು ಒಂದುಗೂಡಿದ್ದಾರೆ ಎಂದು ಖರ್ಗೆ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.

ನಿಮ್ಮ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯನ್ನು ಯಾವಾಗ ಬಹಿರಂಗಪಡಿಸುತ್ತದೆ ಎಂಬುದನ್ನು ಮಿ.ಖರ್ಗೆ ಅವರು ನಮಗೆ ಹೇಳಬೇಕು. ವರದಿ ಬಹಿರಂಗಕ್ಕೆ ಸ್ವಪಕ್ಷದ ಡಿಸಿಎಂ ಅವರೇ ವಿರೋಧ ಪತ್ರಕ್ಕೆ ಸಹಿ ಹಾಕಿದ್ದಾರೆ. ಮಾತ್ರವಲ್ಲದೇ, ಕಾಂಗ್ರೆಸ್‌ ನ ಹಲವು ಶಾಸಕರು, ವೀರಶೈವ ಮಹಾಸಭಾದ ನಾಯಕರು ಸಹಾ ಜಾತಿ ಗಣತಿ ವರದಿ ಬಹಿರಂಗಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪ್ರಹ್ಲಾದ್‌ ಜೋಷಿ ಕುಟುಕಿದರು.

ಇದಕ್ಕೆ ಪ್ರತಿಕ್ರಿಯ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯವರು ಮತ್ತು ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಜಾತಿ ಗಣತಿ ವರದಿಯ ವಿರುದ್ಧವಾಗಿದ್ದಾರೆ. ಅವರು ಕೂಡಾ ವಿರೋಧಿಸುತ್ತಾರೆ ಮತ್ತು ನೀವು ಕೂಡ ವಿರೋಧ ಮಾಡುತ್ತಿದ್ದೀರಿ. ನೀವು ಈ ವಿಷಯದಲ್ಲಿ ಒಂದೇ ಆಗಿದ್ದೀರಿ. ಇದುವೇ ಜಾತಿಯ ಗುಣವಾಗಿದ್ದು, ಮೇಲ್ಜಾತಿಯವರು ಒಳಗೊಳಗೆ ಒಂದುಗೂಡಿರುತ್ತಾರೆ ಎಂದು ಖರ್ಗೆ ಅಸಮಾಧಾನ ಹೊರಹಾಕಿದರು.

andolanait

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

17 mins ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

19 mins ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

2 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

3 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

4 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

5 hours ago