ನವದೆಹಲಿ : ಜಾತಿ ಗಣತಿ ವರದಿ ಬಿಡುಗಡೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಿನ್ನ ನಿಲುವು ವ್ಯಕ್ತಪಡಿಸಿದ್ದಾರೆ. ವರದಿ ಬಿಡುಗಡೆಯಾಗುವ ಮೊದಲೇ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಡಿಕೆ ನಿಲುವಿನ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಟೀಕೆ ಮಾಡಿದ್ದಾರೆ.
ಸೋಮವಾರ ರಾಜ್ಯಸಭೆಯಲ್ಲಿ ಬಹಿರಂಗವಾಗಿ ಟೀಕಿಸಿರುವ ಖರ್ಗೆ ಅವರು, ಜಾತಿಗಣತಿ ವಿರುದ್ಧ ಎಲ್ಲಾ ಮೇಲ್ಜಾತಿಗಳ ಜನರು ಒಂದುಗೂಡಿದ್ದಾರೆ ಎಂದು ಖರ್ಗೆ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.
ನಿಮ್ಮ ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ವರದಿಯನ್ನು ಯಾವಾಗ ಬಹಿರಂಗಪಡಿಸುತ್ತದೆ ಎಂಬುದನ್ನು ಮಿ.ಖರ್ಗೆ ಅವರು ನಮಗೆ ಹೇಳಬೇಕು. ವರದಿ ಬಹಿರಂಗಕ್ಕೆ ಸ್ವಪಕ್ಷದ ಡಿಸಿಎಂ ಅವರೇ ವಿರೋಧ ಪತ್ರಕ್ಕೆ ಸಹಿ ಹಾಕಿದ್ದಾರೆ. ಮಾತ್ರವಲ್ಲದೇ, ಕಾಂಗ್ರೆಸ್ ನ ಹಲವು ಶಾಸಕರು, ವೀರಶೈವ ಮಹಾಸಭಾದ ನಾಯಕರು ಸಹಾ ಜಾತಿ ಗಣತಿ ವರದಿ ಬಹಿರಂಗಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪ್ರಹ್ಲಾದ್ ಜೋಷಿ ಕುಟುಕಿದರು.
ಇದಕ್ಕೆ ಪ್ರತಿಕ್ರಿಯ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯವರು ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಜಾತಿ ಗಣತಿ ವರದಿಯ ವಿರುದ್ಧವಾಗಿದ್ದಾರೆ. ಅವರು ಕೂಡಾ ವಿರೋಧಿಸುತ್ತಾರೆ ಮತ್ತು ನೀವು ಕೂಡ ವಿರೋಧ ಮಾಡುತ್ತಿದ್ದೀರಿ. ನೀವು ಈ ವಿಷಯದಲ್ಲಿ ಒಂದೇ ಆಗಿದ್ದೀರಿ. ಇದುವೇ ಜಾತಿಯ ಗುಣವಾಗಿದ್ದು, ಮೇಲ್ಜಾತಿಯವರು ಒಳಗೊಳಗೆ ಒಂದುಗೂಡಿರುತ್ತಾರೆ ಎಂದು ಖರ್ಗೆ ಅಸಮಾಧಾನ ಹೊರಹಾಕಿದರು.
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…