ತೆಲಂಗಾಣ : ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರನ್ನು ಭೇಟಿಯಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್ ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.
ತೆಲಂಗಾಣ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಧಿಕೃತವಾಗಿ ಫಲಿತಾಂಶ ಇನ್ನೂ ಹೊರಬಂದಿರಲಿಲ್ಲ. ಅಷ್ಟರೊಳಗೆ ಡಿಜಪಿ ಅಂಜನಿ ಕುಮಾರ್ ಅವರು ರೆಡ್ಡಿಯವರನ್ನು ಭೇಟಿಯಾಗಿ, ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದರು. ರೇವಂತ್ ರೆಡ್ಡಿ ಭೇಟಿ ವಿಚಾರವಾಗಿ ಅಂಜನಿ ಕುಮಾರ್ ಅವರಿಂದ ವಿವರಣೆ ಕೇಳಿರುವ ಚುನಾವಣಾ ಆಯೋಗ ಅವರನ್ನು ಅಮಾನತುಗೊಳಿಸಿತ್ತು. ಮತ್ತು ಅವರ ಸ್ಥಾನಕ್ಕೆ ರವಿ ಗುಪ್ತಾ ಅವರನ್ನು ಡಿಜಿಪಿಯಾಗಿ ನೇಮಿಸಿತ್ತು.
ಇನ್ನು ಮುಂದೆ ಇಂತಹ ಪ್ರಮಾದ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅಂಜನಿಕುಮಾರ್ ವಿವರಿಸಿದರು. ಅವರ ವಿವರಣೆಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಅಮಾನತು ಆದೇಶವನ್ನು ಹಿಂಪಡೆದಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್ 64, ಬಿಆರ್ಎಸ್ 39 ಬಿಜೆಪಿ 9, ಎಐಎಂಐಎಂ 7 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಗೆದ್ದಿದೆ.
ಇದೀಗ ಕಾಂಗ್ರೆಸ್ನ ರೇವಂತ್ ರೆಡ್ಡಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…