ರಾಷ್ಟ್ರೀಯ

ಮಾಜಿ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಇಸಿಐ

ತೆಲಂಗಾಣ : ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ನಾಯಕ ರೇವಂತ್ ರೆಡ್ಡಿ ಅವರನ್ನು ಭೇಟಿಯಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್ ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ತೆಲಂಗಾಣ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಧಿಕೃತವಾಗಿ ಫಲಿತಾಂಶ ಇನ್ನೂ ಹೊರಬಂದಿರಲಿಲ್ಲ. ಅಷ್ಟರೊಳಗೆ ಡಿಜಪಿ ಅಂಜನಿ ಕುಮಾರ್  ಅವರು ರೆಡ್ಡಿಯವರನ್ನು ಭೇಟಿಯಾಗಿ, ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದರು. ರೇವಂತ್ ರೆಡ್ಡಿ ಭೇಟಿ ವಿಚಾರವಾಗಿ ಅಂಜನಿ ಕುಮಾರ್ ಅವರಿಂದ ವಿವರಣೆ ಕೇಳಿರುವ ಚುನಾವಣಾ ಆಯೋಗ ಅವರನ್ನು ಅಮಾನತುಗೊಳಿಸಿತ್ತು. ಮತ್ತು ಅವರ ಸ್ಥಾನಕ್ಕೆ ರವಿ ಗುಪ್ತಾ ಅವರನ್ನು ಡಿಜಿಪಿಯಾಗಿ ನೇಮಿಸಿತ್ತು.

ಇನ್ನು ಮುಂದೆ ಇಂತಹ ಪ್ರಮಾದ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅಂಜನಿಕುಮಾರ್ ವಿವರಿಸಿದರು. ಅವರ ವಿವರಣೆಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಅಮಾನತು ಆದೇಶವನ್ನು ಹಿಂಪಡೆದಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64, ಬಿಆರ್‌ಎಸ್ 39 ಬಿಜೆಪಿ 9, ಎಐಎಂಐಎಂ 7 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಗೆದ್ದಿದೆ.

ಇದೀಗ ಕಾಂಗ್ರೆಸ್​ನ ರೇವಂತ್ ರೆಡ್ಡಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

6 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

6 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

6 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

6 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

6 hours ago