ತೆಲಂಗಾಣ : ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರನ್ನು ಭೇಟಿಯಾದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮಾಜಿ ಡಿಜಿಪಿ ಅಂಜನಿ ಕುಮಾರ್ ಅವರ ಅಮಾನತು ಆದೇಶವನ್ನು ಚುನಾವಣಾ ಆಯೋಗ ಹಿಂಪಡೆದಿದೆ.
ತೆಲಂಗಾಣ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಧಿಕೃತವಾಗಿ ಫಲಿತಾಂಶ ಇನ್ನೂ ಹೊರಬಂದಿರಲಿಲ್ಲ. ಅಷ್ಟರೊಳಗೆ ಡಿಜಪಿ ಅಂಜನಿ ಕುಮಾರ್ ಅವರು ರೆಡ್ಡಿಯವರನ್ನು ಭೇಟಿಯಾಗಿ, ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದರು. ರೇವಂತ್ ರೆಡ್ಡಿ ಭೇಟಿ ವಿಚಾರವಾಗಿ ಅಂಜನಿ ಕುಮಾರ್ ಅವರಿಂದ ವಿವರಣೆ ಕೇಳಿರುವ ಚುನಾವಣಾ ಆಯೋಗ ಅವರನ್ನು ಅಮಾನತುಗೊಳಿಸಿತ್ತು. ಮತ್ತು ಅವರ ಸ್ಥಾನಕ್ಕೆ ರವಿ ಗುಪ್ತಾ ಅವರನ್ನು ಡಿಜಿಪಿಯಾಗಿ ನೇಮಿಸಿತ್ತು.
ಇನ್ನು ಮುಂದೆ ಇಂತಹ ಪ್ರಮಾದ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಅಂಜನಿಕುಮಾರ್ ವಿವರಿಸಿದರು. ಅವರ ವಿವರಣೆಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಅಮಾನತು ಆದೇಶವನ್ನು ಹಿಂಪಡೆದಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್ 64, ಬಿಆರ್ಎಸ್ 39 ಬಿಜೆಪಿ 9, ಎಐಎಂಐಎಂ 7 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 1 ಸ್ಥಾನವನ್ನು ಗೆದ್ದಿದೆ.
ಇದೀಗ ಕಾಂಗ್ರೆಸ್ನ ರೇವಂತ್ ರೆಡ್ಡಿ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…