ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಹಜಹಾನ್ ಶೇಖ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಶಹಜಹಾನ್ ಶೇಖ್ನ ಸುಮಾರು 200ಕ್ಕೂ ಹೆಚ್ಚು ಬೆಂಬಲಿಗರ ಗುಂಪು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿತ್ತು. ಅಧಿಕಾರಿಗಳು ಗೇಟ್ ತೆರೆಯಲು ಮುಂದಾದಾಗ ಹಿಂಸಾತ್ಮಕವಾಗಿ ಮಾರ್ಪಟ್ಟ ಗುಂಪು ಅಧಿಕಾರಿಗಳನ್ನು ಬೆನ್ನಟ್ಟಿ ಓಡಿಸಿತು.
ಇನ್ನು ಅಧಿಕಾರಿಗಳಿಗೆ ಗಾಯಗಳಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಲೂಟಿ ಮಾಡಲಾಗಿದೆ. ಅಲ್ಲದೇ ಸ್ಥಳದಲ್ಲಿದ್ದ ಮಾಧ್ಯಮವರ ಮೇಲೂ ಸಹ ದಾಳಿ ನಡೆಸಿದ ಕಿಡಿಗೇಡಿಗಳು ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನು ಮುರಿದು ಹಾಕಿದರು.
ಈ ಘಟನೆ ಕುರಿತು ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಪ್ರತಿಕ್ರಿಯಿಸಿದ್ದು ಖಂಡಿಸಿದ್ದಾರೆ. ಕರ್ತವ್ಯನಿರತ ಜಾರಿ ನಿರ್ದೇಶಕ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಕಾನೂನು ಕುಸಿದಿರುವುದರ ಸಂಕೇತವಾಗಿದೆ ಎಂದು ಹೇಳಿಕೆ ನೀಡಿದರು.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…