ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಹಜಹಾನ್ ಶೇಖ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಶಹಜಹಾನ್ ಶೇಖ್ನ ಸುಮಾರು 200ಕ್ಕೂ ಹೆಚ್ಚು ಬೆಂಬಲಿಗರ ಗುಂಪು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿತ್ತು. ಅಧಿಕಾರಿಗಳು ಗೇಟ್ ತೆರೆಯಲು ಮುಂದಾದಾಗ ಹಿಂಸಾತ್ಮಕವಾಗಿ ಮಾರ್ಪಟ್ಟ ಗುಂಪು ಅಧಿಕಾರಿಗಳನ್ನು ಬೆನ್ನಟ್ಟಿ ಓಡಿಸಿತು.
ಇನ್ನು ಅಧಿಕಾರಿಗಳಿಗೆ ಗಾಯಗಳಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಲೂಟಿ ಮಾಡಲಾಗಿದೆ. ಅಲ್ಲದೇ ಸ್ಥಳದಲ್ಲಿದ್ದ ಮಾಧ್ಯಮವರ ಮೇಲೂ ಸಹ ದಾಳಿ ನಡೆಸಿದ ಕಿಡಿಗೇಡಿಗಳು ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನು ಮುರಿದು ಹಾಕಿದರು.
ಈ ಘಟನೆ ಕುರಿತು ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಪ್ರತಿಕ್ರಿಯಿಸಿದ್ದು ಖಂಡಿಸಿದ್ದಾರೆ. ಕರ್ತವ್ಯನಿರತ ಜಾರಿ ನಿರ್ದೇಶಕ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಕಾನೂನು ಕುಸಿದಿರುವುದರ ಸಂಕೇತವಾಗಿದೆ ಎಂದು ಹೇಳಿಕೆ ನೀಡಿದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…