ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಹಜಹಾನ್ ಶೇಖ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಶಹಜಹಾನ್ ಶೇಖ್ನ ಸುಮಾರು 200ಕ್ಕೂ ಹೆಚ್ಚು ಬೆಂಬಲಿಗರ ಗುಂಪು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿತ್ತು. ಅಧಿಕಾರಿಗಳು ಗೇಟ್ ತೆರೆಯಲು ಮುಂದಾದಾಗ ಹಿಂಸಾತ್ಮಕವಾಗಿ ಮಾರ್ಪಟ್ಟ ಗುಂಪು ಅಧಿಕಾರಿಗಳನ್ನು ಬೆನ್ನಟ್ಟಿ ಓಡಿಸಿತು.
ಇನ್ನು ಅಧಿಕಾರಿಗಳಿಗೆ ಗಾಯಗಳಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಲೂಟಿ ಮಾಡಲಾಗಿದೆ. ಅಲ್ಲದೇ ಸ್ಥಳದಲ್ಲಿದ್ದ ಮಾಧ್ಯಮವರ ಮೇಲೂ ಸಹ ದಾಳಿ ನಡೆಸಿದ ಕಿಡಿಗೇಡಿಗಳು ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನು ಮುರಿದು ಹಾಕಿದರು.
ಈ ಘಟನೆ ಕುರಿತು ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಪ್ರತಿಕ್ರಿಯಿಸಿದ್ದು ಖಂಡಿಸಿದ್ದಾರೆ. ಕರ್ತವ್ಯನಿರತ ಜಾರಿ ನಿರ್ದೇಶಕ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಕಾನೂನು ಕುಸಿದಿರುವುದರ ಸಂಕೇತವಾಗಿದೆ ಎಂದು ಹೇಳಿಕೆ ನೀಡಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…