ರಾಷ್ಟ್ರೀಯ

ಪರಿಶೀಲನೆಗೆ ಬಂದ ಇಡಿ ಅಧಿಕಾರಿಗಳ ಮೇಲೆ ಹಲ್ಲೆ

ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಶಾಸಕ ಶಹಜಹಾನ್‌ ಶೇಖ್‌ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಶಹಜಹಾನ್‌ ಶೇಖ್‌ನ ಸುಮಾರು 200ಕ್ಕೂ ಹೆಚ್ಚು ಬೆಂಬಲಿಗರ ಗುಂಪು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿತ್ತು. ಅಧಿಕಾರಿಗಳು ಗೇಟ್‌ ತೆರೆಯಲು ಮುಂದಾದಾಗ ಹಿಂಸಾತ್ಮಕವಾಗಿ ಮಾರ್ಪಟ್ಟ ಗುಂಪು ಅಧಿಕಾರಿಗಳನ್ನು ಬೆನ್ನಟ್ಟಿ ಓಡಿಸಿತು.

ಇನ್ನು ಅಧಿಕಾರಿಗಳಿಗೆ ಗಾಯಗಳಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಲೂಟಿ ಮಾಡಲಾಗಿದೆ. ಅಲ್ಲದೇ ಸ್ಥಳದಲ್ಲಿದ್ದ ಮಾಧ್ಯಮವರ ಮೇಲೂ ಸಹ ದಾಳಿ ನಡೆಸಿದ ಕಿಡಿಗೇಡಿಗಳು ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನು ಮುರಿದು ಹಾಕಿದರು.

ಈ ಘಟನೆ ಕುರಿತು ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್‌ ಪ್ರತಿಕ್ರಿಯಿಸಿದ್ದು ಖಂಡಿಸಿದ್ದಾರೆ. ಕರ್ತವ್ಯನಿರತ ಜಾರಿ ನಿರ್ದೇಶಕ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಕಾನೂನು ಕುಸಿದಿರುವುದರ ಸಂಕೇತವಾಗಿದೆ ಎಂದು ಹೇಳಿಕೆ ನೀಡಿದರು.

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

2 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

6 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

7 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

7 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

11 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

11 hours ago