ಇಂದು ( ಜನವರಿ 5 ) ಇಡಿ ಅಧಿಕಾರಿಗಳ ತಂಡ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಹಜಹಾನ್ ಶೇಖ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಶಹಜಹಾನ್ ಶೇಖ್ನ ಸುಮಾರು 200ಕ್ಕೂ ಹೆಚ್ಚು ಬೆಂಬಲಿಗರ ಗುಂಪು ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿತ್ತು. ಅಧಿಕಾರಿಗಳು ಗೇಟ್ ತೆರೆಯಲು ಮುಂದಾದಾಗ ಹಿಂಸಾತ್ಮಕವಾಗಿ ಮಾರ್ಪಟ್ಟ ಗುಂಪು ಅಧಿಕಾರಿಗಳನ್ನು ಬೆನ್ನಟ್ಟಿ ಓಡಿಸಿತು.
ಇನ್ನು ಅಧಿಕಾರಿಗಳಿಗೆ ಗಾಯಗಳಾಗಿದ್ದು, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಲೂಟಿ ಮಾಡಲಾಗಿದೆ. ಅಲ್ಲದೇ ಸ್ಥಳದಲ್ಲಿದ್ದ ಮಾಧ್ಯಮವರ ಮೇಲೂ ಸಹ ದಾಳಿ ನಡೆಸಿದ ಕಿಡಿಗೇಡಿಗಳು ಕ್ಯಾಮೆರಾ ಹಾಗೂ ಇತರ ಉಪಕರಣಗಳನ್ನು ಮುರಿದು ಹಾಕಿದರು.
ಈ ಘಟನೆ ಕುರಿತು ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಪ್ರತಿಕ್ರಿಯಿಸಿದ್ದು ಖಂಡಿಸಿದ್ದಾರೆ. ಕರ್ತವ್ಯನಿರತ ಜಾರಿ ನಿರ್ದೇಶಕ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದಲ್ಲಿ ಕಾನೂನು ಕುಸಿದಿರುವುದರ ಸಂಕೇತವಾಗಿದೆ ಎಂದು ಹೇಳಿಕೆ ನೀಡಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…