ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.
ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.
ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…