ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.
ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.
ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…