ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.
ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.
ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…