ರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ಗೆಲವು ಖಚಿತಪಡಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.

ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್‌ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.

ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

49 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

50 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

52 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

53 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

58 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago