ರಾಷ್ಟ್ರೀಯ

ಪ್ರಧಾನಿ ಮೋದಿ ಚಿತ್ರ ಇರುವ “ಸೆಲ್ಫಿ ಪಾಯಿಂಟ್” ಸ್ಥಾಪಿಸಿ: ವಿವಿಗಳಿಗೆ ಯುಜಿಸಿ ಸೂಚನೆ

ನವದೆಹಲಿ : ದೇಶದ ಎಲ್ಲಾ ವಿವಿ ಮತ್ತು ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳಿರುವ ಸೆಲ್ಪಿ ಪಾಯಿಂಟ್‌ಗಳನ್ನು ಅಥವಾ ತಾಣಗಳನ್ನು ಸ್ಥಾಪಿಸುವಂತೆ ಎಲ್ಲಾ ವಿಶ್ವ ವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಸೂಚನೆ ನೀಡಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನಾ ಈ ನಿರ್ದೇಶನ ಹೊರಬಿದ್ದಿದೆ ಎಂದು telegraphindia.com ವರದಿ ಮಾಡಿದೆ.

ಪ್ರತಿಯೊಂದು ಸೆಲ್ಪಿ ಪಾಯಿಂಟ್‌ನ್ನು ಕ್ಯಾಂಪಸ್‌ನಲ್ಲಿಯ ಅಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ವಿನ್ಯಾಸವನ್ನು ಹೊಂದಿರಬೇಕು ಎಂದು ಯುಜಿಸಿ ಸೂಚಿಸಿದೆ.

ನರೇಂದ್ರ ಮೋದಿ ಅವರ ಸೆಲ್ಫಿ ತಾಣಗಳನ್ನು ನಿರ್ಮಿಸಿ ವಿವಿಧ ಕ್ಷೇತ್ರದಲ್ಲಿ ಭಾರತದ ಸಾಧನೆಗಳತ್ತ ಗಮನ ಸೆಳೆಯುವುದು ಆ ಮೂಲಕ ಸಾಮೂಹಿಕ ಹೆಮ್ಮೆಯನ್ನು ಬೆಳೆಸುವುದು ಇದರ ಉದ್ದೇಶ ಎಂದು ಯುಜಿ ಹೇಳಿದೆ.

ಈ ಬಗ್ಗೆ ಹಲವಾರು ಶಿಕ್ಷಣ ತಜ್ಞರು ಆರೋಪ ಮಾಡಿದ್ದು, ಮೋದಿ ಅವರ ಸೆಲ್ಫಿ ತಾಣಗಳು ಸೆಲ್ಫಿ ಕ್ಲಿಕ್ಕಿಸಲು, ಮಾಧ್ಯಮ ವೇದಿಕೆ ಹಂಚಿಕೊಳ್ಳಲು, ವಿದ್ಯಾರ್ಥಿ ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಇದನ್ನು ಬಜೆಪಿ ಅನಧಿಕೃತ ಪ್ರಚಾರಕರನ್ನಾಗಿ ಮಾಡುತ್ತಿದೆ. ಶಿಕ್ಷಣ ಸಂಸ್ಥೆಗಳು ತಮಗೆ ಸಂಬಂಧವೇ ಇಲ್ಲದ ‘ವ್ಯಕ್ತಿನಿಷ್ಠೆ ನಿರ್ಮಾಣ’ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಷ್ ಜೋಶಿ ಅವರು ಶುಕ್ರವಾರ ಎಲ್ಲ ಭಾರತೀಯ ವಿವಿಗಳ ಕುಲಪತಿಗಳು ಮತ್ತು ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಕಳುಹಿಸಿರುವ ಪತ್ರದಲ್ಲಿ, ‘ವಿವಿಧ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯ ಸ್ಪೂರ್ತಿಯೊಂದಿಗೆ ಯುವಜನರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಇದು ಅನನ್ಯ ಅವಕಾಶವಾಗಿದೆ’ ಎಂದು ಹೇಳಿದ್ದಾರೆ.

ನಿಮ್ಮ ಸಂಸ್ಥೆಯೊಳಗೆ ಸೆಲ್ಪಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿರುವ ಅದ್ಭುತ ಪ್ರಗತಿಗಳನ್ನು ಸಂಭ್ರಮಿಸೋಣ ಮತ್ತು ಅವುಗಳನ್ನು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಯ, ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ರಡಿ ನೂತನ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಸೆಲ್ಸಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

ಯುಜಿಸಿಯು ಸೆಲ್ಟಿ ಪಾಯಿಂಟ್‌ಗಳಿಗಾಗಿ ಹಲವಾರು ವಿನ್ಯಾಸಗಳನ್ನು ಸೂಚಿಸಿದೆ. ಪ್ರತಿ ವಿನ್ಯಾಸವನ್ನೂ ಶಿಕ್ಷಣದ ಅಂತರರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕ್‌ಥಾನ್, ಭಾರತೀಯ ಜ್ಞಾನ ವ್ಯವಸ್ಥೆಬಹುಭಾಷೀಯತೆ ಮತ್ತು ಉನ್ನತ ಶಿಕ್ಷಣ, ಸಂಶೋಧನೆ ಹಾಗೂ ನವೀನತೆಗಳಲ್ಲಿ ಭಾರತದ ಪ್ರಗತಿಯಂತಹ ನಿರ್ದಿಷ್ಟ ವಿಷಯಕ್ಕೆ ಅನುಗುಣವಾಗಿ ರೂಪಿಸಲಾಗಿದೆ.

ಸರಕಾರವು ಪ್ರತಿಯೊಂದೂ ಸಾಮಾನ್ಯ ಸಾಧನೆಯನ್ನು ಅದ್ಭುತವೆಂದು ಬಿಂಬಿಸುತ್ತಿದೆ ಮತ್ತು ಅದರ ಹೆಗ್ಗಳಿಕೆಯನ್ನು ಪ್ರಧಾನಿಯವರಿಗೆ ಸಲ್ಲಿಸುತ್ತಿದೆ ಎಂದು ಹೇಳಿದ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಅಧ್ಯಾಪಕರೋರ್ವರು, ಈಗ ನಡೆಯುತ್ತಿರುವುದು ಆರಾಧನಾ ವ್ಯಕ್ತಿತ್ವವನ್ನು ನಿರ್ಮಿಸುವ ಪೂರ್ಣ ಪ್ರಮಾಣದ ಪ್ರಚಾರವಾಗಿದೆ. ಇದಕ್ಕಾಗಿ ಸರಕಾರವು ಈ ಚಟುವಟಿಕೆಗಳಿಗೆ ಸಂಬಂಧವೇ ಇಲ್ಲದ ಸಾರ್ವಜನಿಕ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಸರಕಾರ ಅಥವಾ ಯುಜಿಸಿ ಇಂತಹ ಪ್ರಚಾರವನ್ನು ಉತ್ತೇಜಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದರು.

ಕೋವಿಡ್ ಲಸಿಕೆ ಪ್ರಮಾಣಪತ್ರಗಳು ಸೇರಿದಂತೆ ಹಲವಾರು ಮಾರ್ಗಗಳ ಮೂಲಕ ಪ್ರಧಾನಿ ಮೋದಿಯವರ ಚಿತ್ರಗಳನ್ನು ಪ್ರಸಾರ ಮಾಡಲಾಗಿದೆ. ರೋಜಗಾರ್ ಮೇಲಾಗಳಲ್ಲಿ ಸೆಲ್ಪಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ ಹೊಸದಾಗಿ ನೇಮಕಗೊಂಡಿರುವ ಸರಕಾರಿ ಉದ್ಯೋಗಿಗಳು ಅಥವಾ ಪದೋನ್ನತಿಗೊಂಡಿರುವ ಉದ್ಯೋಗಿಗಳು ಮೋದಿಯವರ ಕಟ್-ಔಟ್‌ಗಳ ಮುಂದೆ ನಿಂತುಕೊಂಡು ಚಿತ್ರವನ್ನು ತೆಗೆಸಿಕೊಳ್ಳಬೇಕಿದೆ ಎಂದು ಹೇಳಿದ ಅವರು, ಈ ಎಲ್ಲ ಚಟುವಟಿಕೆಗಳಿಗೆ ಒಬ್ಬನೇ ನಾಯಕ ಕಾರಣ ಎಂಬ ನವಿರಾದ ಗ್ರಹಿಕೆಯನ್ನು ಸೃಷ್ಟಿಸಲಾಗುತ್ತಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅಮಾಯಕ ಮತದಾರರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಇದನ್ನು ಮಾಡಲಾಗುತ್ತಿದೆ ಎಂದರು.

ವೈವಿಧ್ಯಮಯ ವಿಚಾರಗಳನ್ನು ಪ್ರೋತ್ಸಾಹಿಸುವ, ಚರ್ಚೆಗಳನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ವಿಷಯಗಳಿಗೆ ಒತ್ತು ನೀಡುವ ಸೆಲ್ಪಿ ಪಾಯಿಂಟ್‌ಗಳಿಗೆ ಸದಾ ಸ್ವಾಗತವಿದೆ ಎಂದು ಹೇಳಿದ ಜವಾಹರಲಾಲ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದ ಪ್ರಾಧ್ಯಾಪಕರೋರ್ವರು,ವಿವಿಯು ಬಹು ವಿಚಾರಗಳನ್ನು ಪೋಷಿಸಲು ಸ್ಥಳವಾಗಿದೆ. ಪ್ರಬಲ ಶಕ್ತಿಗಳಿಂದ ಮುಂದೊತ್ತಲ್ಪಟ್ಟ ಒಂದೇ ಅಭಿಪ್ರಾಯವನ್ನು ಉತ್ತೇಜಿಸುವ ಆಲೋಚನೆಯು ವಿವಿಯ ದೀರ್ಘಾವಧಿಯ ಹಿತಾಸಕ್ತಿಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದರು.

ಯುಜಿಸಿಯು ಇಂತಹ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ ಮತ್ತು ಅವುಗಳನ್ನು ನಿರ್ಲಕ್ಷಿಸಲು ಕ್ಯಾಂಪಸ್ ಆಡಳಿತಗಳು ಮುಕ್ತವಾಗಿವೆ ಎಂದು ಹೇಳಿದ ಮ್ಯಾನೇಜ್‌ಮೆಂಟ್ ಶಿಕ್ಷಕರೋರ್ವರು, ಶಿಕ್ಷಣ ಸಂಸ್ಥೆಗಳು ಇಂತಹ ಸಲಹೆಗಳಿಗೆ ಕಿವಿಗೊಡಬಾರದು. ಸಂಸ್ಥೆಗಳ ಮುಖ್ಯಸ್ಥರು ಭಟ್ಟಂಗಿಗಳಲ್ಲದಿದ್ದರೆ ಅವರಿಗೆ ಇಂತಹ ಸಲಹೆಗಳನ್ನು ಕಡೆಗಣಿಸಲು ಸಾಧ್ಯವಾಗುತ್ತದೆ ಎಂದರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago