ರಾಷ್ಟ್ರೀಯ

ಭ್ರಷ್ಟಾಚಾರದಲ್ಲಿ ‘ಮಹಾದೇವ’ನನ್ನೂ ಕೂಡ ಬಿಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ ಕಾಂಗ್ರೆಸ್ ತೊಡಗಿದೆ’ ಎಂದು ವಾಗ್ದಾಳಿ ನಡೆಸಿದರು.

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರವು ಮಹಾದೇವನ ಹೆಸರಿನಲ್ಲಿಯೂ ರಾಜ್ಯದ ಜನರನ್ನು ಶೋಷಿಸುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಹವಾಲಾ ಹಣವನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಬೆಳೆಸಿಕೊಳ್ಳುತ್ತಿದೆ. ಇದೀಗ ತಮ್ಮ ಭ್ರಷ್ಟಾಚಾರಕ್ಕೆ ‘ಮಹಾದೇವ’ನ ಹೆಸರನ್ನು ಬಿಟ್ಟಿಲ್ಲ. ರಾಜ್ಯವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

‘ದುಬೈ ಮೂಲದ ಬೆಟ್ಟಿಂಗ್‌ ಆ್ಯಪ್‌ ಪ್ರವರ್ತಕರ ಜತೆ ಕಾಂಗ್ರೆಸ್‌ ನಂಟು ಹೊಂದಿದೆ. ತನಿಖಾಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಭಯಗೊಂಡಿರುವ ಸಿಎಂ ಭೂಪೇಶ್‌ ಬಘೇಲ್‌ ಅವರೀಗ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಯಾವುದೇ ಯೋಜನೆಗಳ ಅನುಮೋದನೆಗೆ ರಾಜ್ಯ ಸರ್ಕಾರ 30 ಪರ್ಸೆಂಟ್ ಕಮಿಷನ್ ಬೇಡಿಕೆ ಒಡ್ಡುತ್ತಿದೆ. 80 ಕೋಟಿ ಬಡತನ ಪೀಡಿತ ಜನಸಂಖ್ಯೆಗೆ ‘ಉಚಿತ ಪಡಿತರ ಯೋಜನೆ’ಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ ಅವರು, ದೇಶದ ಏಕೈಕ ಜಾತಿ ಎಂದು ಬಡವರಿಗೆ ಒತ್ತು ನೀಡಿದರು.

ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಾವಿರಾರು ಬಡ ಕುಟುಂಬಗಳಿಗೆ ಶಾಶ್ವತ ಮನೆ, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕಗಳು ಮತ್ತು ಪ್ರತಿ ಮನೆಗೆ ನಲ್ಲಿ ನೀರು ಸರಬರಾಜು ಮಾಡಲಾಗುವುದು. ಬಡವರ ಕಲ್ಯಾಣದ ಅವರ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ, ಅತ್ಯಂತ ಪ್ರಮುಖವಾದ ಜಾತಿ ಬಡತನವಾಗಿದೆ ಮತ್ತು ಬಿಜೆಪಿಯ ನೀತಿಗಳು ಕಳೆದ ಐದು ವರ್ಷಗಳಲ್ಲಿ 13.50 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿವೆ. ಕಾಂಗ್ರೆಸ್ ಜಾತಿ ಆಧಾರಿತ ರಾಜಕೀಯದಲ್ಲಿ ತೊಡಗಿದೆ. ಬಿಜೆಪಿ ದಲಿತರು ಮತ್ತು ಒಬಿಸಿ ಸಮುದಾಯಕ್ಕೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ವ್ಯಾಪಕ ಪ್ರಾತಿನಿಧ್ಯ ಒದಗಿಸಿದೆ. ಕೇಂದ್ರ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯ ಒಬಿಸಿ ಮಂತ್ರಿಗಳು ಇದ್ದಾರೆ ಎಂದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

12 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

13 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

13 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

13 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

13 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

13 hours ago