ರಾಯ್ಪುರ : ಛತ್ತೀಸ್ಗಢ ಸಿಎಂಗೆ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್ಸ್ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ ಕಾಂಗ್ರೆಸ್ ತೊಡಗಿದೆ’ ಎಂದು ವಾಗ್ದಾಳಿ ನಡೆಸಿದರು.
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರವು ಮಹಾದೇವನ ಹೆಸರಿನಲ್ಲಿಯೂ ರಾಜ್ಯದ ಜನರನ್ನು ಶೋಷಿಸುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಹವಾಲಾ ಹಣವನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಬೆಳೆಸಿಕೊಳ್ಳುತ್ತಿದೆ. ಇದೀಗ ತಮ್ಮ ಭ್ರಷ್ಟಾಚಾರಕ್ಕೆ ‘ಮಹಾದೇವ’ನ ಹೆಸರನ್ನು ಬಿಟ್ಟಿಲ್ಲ. ರಾಜ್ಯವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
‘ದುಬೈ ಮೂಲದ ಬೆಟ್ಟಿಂಗ್ ಆ್ಯಪ್ ಪ್ರವರ್ತಕರ ಜತೆ ಕಾಂಗ್ರೆಸ್ ನಂಟು ಹೊಂದಿದೆ. ತನಿಖಾಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಭಯಗೊಂಡಿರುವ ಸಿಎಂ ಭೂಪೇಶ್ ಬಘೇಲ್ ಅವರೀಗ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಯಾವುದೇ ಯೋಜನೆಗಳ ಅನುಮೋದನೆಗೆ ರಾಜ್ಯ ಸರ್ಕಾರ 30 ಪರ್ಸೆಂಟ್ ಕಮಿಷನ್ ಬೇಡಿಕೆ ಒಡ್ಡುತ್ತಿದೆ. 80 ಕೋಟಿ ಬಡತನ ಪೀಡಿತ ಜನಸಂಖ್ಯೆಗೆ ‘ಉಚಿತ ಪಡಿತರ ಯೋಜನೆ’ಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ ಅವರು, ದೇಶದ ಏಕೈಕ ಜಾತಿ ಎಂದು ಬಡವರಿಗೆ ಒತ್ತು ನೀಡಿದರು.
ಛತ್ತೀಸ್ಗಢದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಾವಿರಾರು ಬಡ ಕುಟುಂಬಗಳಿಗೆ ಶಾಶ್ವತ ಮನೆ, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕಗಳು ಮತ್ತು ಪ್ರತಿ ಮನೆಗೆ ನಲ್ಲಿ ನೀರು ಸರಬರಾಜು ಮಾಡಲಾಗುವುದು. ಬಡವರ ಕಲ್ಯಾಣದ ಅವರ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ, ಅತ್ಯಂತ ಪ್ರಮುಖವಾದ ಜಾತಿ ಬಡತನವಾಗಿದೆ ಮತ್ತು ಬಿಜೆಪಿಯ ನೀತಿಗಳು ಕಳೆದ ಐದು ವರ್ಷಗಳಲ್ಲಿ 13.50 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿವೆ. ಕಾಂಗ್ರೆಸ್ ಜಾತಿ ಆಧಾರಿತ ರಾಜಕೀಯದಲ್ಲಿ ತೊಡಗಿದೆ. ಬಿಜೆಪಿ ದಲಿತರು ಮತ್ತು ಒಬಿಸಿ ಸಮುದಾಯಕ್ಕೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ವ್ಯಾಪಕ ಪ್ರಾತಿನಿಧ್ಯ ಒದಗಿಸಿದೆ. ಕೇಂದ್ರ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯ ಒಬಿಸಿ ಮಂತ್ರಿಗಳು ಇದ್ದಾರೆ ಎಂದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…